ಕೇರಳದ ಚೆಂಡೆವಾದ್ಯ, ನಂದಿಧ್ವಜ ಕುಣಿತ, ಕೀಲುಕುದುರೆ, ಡೊಳ್ಳುಕುಣಿತ, ಬಾಣಬಿರುಸು, ಪಟ್ಟದ ಕುಣಿತ ವಿವಿಧ ಜಾನಪದ ಕಲಾ ತಂಡಗಳ ಪ್ರದರ್ಶನ ನೋಡುಗರ ಕಣ್ಮನ ಸೆಳೆದವು. ರಥೋತ್ಸವದಲ್ಲಿ ಭಾಗವಹಿಸುವ ಸಾವಿರಾರು ಭಕ್ತರ ದಾಹ ಮತ್ತು ಹಸಿವು ತಣಿಸಲು ಗ್ರಾಮಸ್ಥರು ಅಲ್ಲಲ್ಲಿ ಅರವಂಟಿಕೆಗಳನ್ನು ಹಾಕಿ ಅನ್ನದಾನ, ಕುಡಿಯುವ ನೀರು, ಮಜ್ಜಿಗೆ, ಪಾನಕ, ಕೋಸಂಬರಿ ವಿತರಣೆ ಮಾಡಿದರು.