<p><strong>ಬೆಂಗಳೂರು</strong>: ‘ಸಾಹಿತ್ಯ, ಕಾವ್ಯ ಮತ್ತು ಸಂಸ್ಕೃತಿ ಚಿಂತನೆಯನ್ನು ಕಾವ್ಯಾಸಕ್ತರಿಗೆ, ವಿದ್ಯಾರ್ಥಿಗಳಿಗೆ ಪಸರಿಸಿದ ಕಿ.ರಂ. ಜಂಗಮನಂತೆ ಬದುಕಿದರು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು.</p>.<p>ಜನಸಂಸ್ಕೃತಿ ಪ್ರತಿಷ್ಠಾನ, ಬೆಂಗಳೂರು ಆರ್ಟ್ ಫೌಂಡೇಷನ್ ಮತ್ತು ಕಿ.ರಂ. ಪ್ರಕಾಶನದ ಸಹಯೋಗದಲ್ಲಿ <br>ವಿಮರ್ಶಕ ಪ್ರೊ.ಕಿ.ರಂ.ನಾಗರಾಜ ಅವರ ನೆನಪಿನಲ್ಲಿ ಆಯೋಜಿಸಿದ್ದ ‘ಕಾಡುವ ಕಿ.ರಂ. ಅಹೋರಾತ್ರಿ ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಿ.ರಂ. ಅವರು ಹೆಚ್ಚು ಬರೆಯದಿದ್ದರೂ ದಶಕಗಳ ಸಾಹಿತ್ಯಕ್ಕೆ ಬೇಕಾದ ಚಿಂತನೆ, ಹೊಸ ಹೊಳಹುಗಳನ್ನು ಬಿಟ್ಟು ಹೋಗಿದ್ದಾರೆ‘ ಎಂದರು.</p>.<p>ಕಲಾವಿದ ಎಂ.ಎಸ್ ಮೂರ್ತಿ ‘ಹಳಗನ್ನಡ, ಹೊಸಗನ್ನಡ ಸಾಹಿತ್ಯಗಳೆರಡನ್ನು ಸಮನ್ವಯಗೊಳಿಸಿ ಹೊಸ ಒಳನೋಟಗಳನ್ನು ನೀಡಿದವರು ಕಿ.ರಂ. ಅವರ ಚಿಂತನೆಗಳು ಇಂದಿಗೂ ಜೀವಂತ’ ಎಂದು ಬಣ್ಣಿಸಿದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಕಾವ್ಯವಾಚನ ಮಾಡಿದರು. ಕಾರ್ಯಕ್ರಮದಲ್ಲಿ ‘ಕಾಡುವ ಕಿ.ರಂ. ಹೊಸ ಕವಿತೆ 2025’ ಪುಸ್ತಕ ಜನಾರ್ಪಣೆಗೊಳಿಸಲಾಯಿತು. ವಿವಿಧ ಕ್ಷೇತ್ರಗಳ ಗಣ್ಯರಿಗೆ ಕಿ.ರಂ. ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆಲ್ಕೆರೆ ಶಿವಕುಮಾರ್ ಮತ್ತು ಸಂಗಡಿಗರು ಜನಪದ ಗಾಯನವನ್ನು ಪ್ರಸ್ತುತಪಡಿಸಿದರು</p>.<p>ಕಿ.ರಂ.ನಾಗರಾಜ ರಚನೆಯ ‘ನೀಗಿಕೊಂಡ’ ಸಂಸ ನಾಟಕ ಪ್ರದರ್ಶನಗೊಂಡಿತು. ನಂತರ ಅಹೋರಾತ್ರಿ ಚರ್ಚೆ, ಕವಿಗೋಷ್ಠಿ, ಜನಪದ ಕಾವ್ಯ ಗಾಯನ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸಾಹಿತ್ಯ, ಕಾವ್ಯ ಮತ್ತು ಸಂಸ್ಕೃತಿ ಚಿಂತನೆಯನ್ನು ಕಾವ್ಯಾಸಕ್ತರಿಗೆ, ವಿದ್ಯಾರ್ಥಿಗಳಿಗೆ ಪಸರಿಸಿದ ಕಿ.ರಂ. ಜಂಗಮನಂತೆ ಬದುಕಿದರು’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದರು.</p>.<p>ಜನಸಂಸ್ಕೃತಿ ಪ್ರತಿಷ್ಠಾನ, ಬೆಂಗಳೂರು ಆರ್ಟ್ ಫೌಂಡೇಷನ್ ಮತ್ತು ಕಿ.ರಂ. ಪ್ರಕಾಶನದ ಸಹಯೋಗದಲ್ಲಿ <br>ವಿಮರ್ಶಕ ಪ್ರೊ.ಕಿ.ರಂ.ನಾಗರಾಜ ಅವರ ನೆನಪಿನಲ್ಲಿ ಆಯೋಜಿಸಿದ್ದ ‘ಕಾಡುವ ಕಿ.ರಂ. ಅಹೋರಾತ್ರಿ ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕಿ.ರಂ. ಅವರು ಹೆಚ್ಚು ಬರೆಯದಿದ್ದರೂ ದಶಕಗಳ ಸಾಹಿತ್ಯಕ್ಕೆ ಬೇಕಾದ ಚಿಂತನೆ, ಹೊಸ ಹೊಳಹುಗಳನ್ನು ಬಿಟ್ಟು ಹೋಗಿದ್ದಾರೆ‘ ಎಂದರು.</p>.<p>ಕಲಾವಿದ ಎಂ.ಎಸ್ ಮೂರ್ತಿ ‘ಹಳಗನ್ನಡ, ಹೊಸಗನ್ನಡ ಸಾಹಿತ್ಯಗಳೆರಡನ್ನು ಸಮನ್ವಯಗೊಳಿಸಿ ಹೊಸ ಒಳನೋಟಗಳನ್ನು ನೀಡಿದವರು ಕಿ.ರಂ. ಅವರ ಚಿಂತನೆಗಳು ಇಂದಿಗೂ ಜೀವಂತ’ ಎಂದು ಬಣ್ಣಿಸಿದರು.</p>.<p>ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಎಲ್.ಎನ್.ಮುಕುಂದರಾಜ್ ಕಾವ್ಯವಾಚನ ಮಾಡಿದರು. ಕಾರ್ಯಕ್ರಮದಲ್ಲಿ ‘ಕಾಡುವ ಕಿ.ರಂ. ಹೊಸ ಕವಿತೆ 2025’ ಪುಸ್ತಕ ಜನಾರ್ಪಣೆಗೊಳಿಸಲಾಯಿತು. ವಿವಿಧ ಕ್ಷೇತ್ರಗಳ ಗಣ್ಯರಿಗೆ ಕಿ.ರಂ. ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆಲ್ಕೆರೆ ಶಿವಕುಮಾರ್ ಮತ್ತು ಸಂಗಡಿಗರು ಜನಪದ ಗಾಯನವನ್ನು ಪ್ರಸ್ತುತಪಡಿಸಿದರು</p>.<p>ಕಿ.ರಂ.ನಾಗರಾಜ ರಚನೆಯ ‘ನೀಗಿಕೊಂಡ’ ಸಂಸ ನಾಟಕ ಪ್ರದರ್ಶನಗೊಂಡಿತು. ನಂತರ ಅಹೋರಾತ್ರಿ ಚರ್ಚೆ, ಕವಿಗೋಷ್ಠಿ, ಜನಪದ ಕಾವ್ಯ ಗಾಯನ ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>