<p>ಬೆಂಗಳೂರು: ದಾಖಲೆಗಳನ್ನು ಪರಿಶೀಲಿಸದೆ ₹4.06 ಕೋಟಿ ಪರಿಹಾರ ವಿತರಿಸಿದ ಆರೋಪದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಅಧಿಕಾರಿಗಳು ಸೇರಿ ಐವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<p>ಮಟ್ರೊ ರೈಲು ಮಾರ್ಗ ನಿರ್ಮಾಣಕ್ಕೆ ಬೆನ್ನಿಗಾನಹಳ್ಳಿ ಗ್ರಾಮದ ಸರ್ವೆ ನಂಬರ್ 83/2ರ ಜಾಗದ ವ್ಯಾಜ್ಯ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿತ್ತು. ಆದರೆ, ಆ ಜಾಗ ಬಾಡಿಗೆಗೆ ಪಡೆದಿದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅದು ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ.</p>.<p>ಇದೇ ಸರ್ವೆ ನಂಬರ್ನಲ್ಲಿ 142.56 ಚದರ ಮೀಟರ್ ಜಾಗವನ್ನು ಮೆಟ್ರೊ ರೈಲು ಮಾರ್ಗಕ್ಕೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ವ್ಯಾಜ್ಯ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿ ಇರುವುದರಿಂದ ಪರಿಹಾರ ವಿತರಣೆ ಮಾಡುವಾಗ ಎಚ್ಚರಿಕೆ ವಹಿಸುವಂತೆ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿಗೆ(ಮೆಟ್ರೊ) ಬಿಎಂಆರ್ಸಿಎಲ್ ಪ್ರಧಾನ ವ್ಯವಸ್ಥಾಪಕ(ಭೂಸ್ವಾಧೀನ) ಎಂ.ಎಸ್.ಚನ್ನಪ್ಪಗೌಡರ್ ಪತ್ರ ಬರೆದಿದ್ದರು.</p>.<p>ಪರಿಹಾರ ಪಡೆದಿದ್ದಾರೆ ಎನ್ನಲಾದ ತಿರುಮಲೇಶ್, ಮೊಹಮ್ಮದ್ ಮಜೇಕ್ ಅಹಮದ್, ಬಿ.ಎಂ.ಉದಯ್, ಬಿ.ಎಂ.ವಿನಯ್ ಅವರನ್ನು ಆರೋಪಿಗಳನ್ನಾಗಿಸಿ ಹಲಸೂರು ಗೇಟ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.</p>.<p>‘ನಕಲಿ ದಾಖಲೆ ಸೃಷ್ಟಿಸಿಕೊಂಡು ಕೆಐಎಡಿಬಿ ಅಧಿಕಾರಿಗಳೊಂದಿಗೆ ಶಾಮೀಲಾಗಿ ಪರಿಹಾರ ಪಡೆದು ಮೋಸ ಮಾಡಲಾಗಿದೆ’ ಎಂದು ಎಂ.ಯತೀಶ್ ನೀಡಿರುವ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<p>‘ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೂ ಇದೇ ಸರ್ವೆ ನಂಬರ್ನ ಜಾಗವನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ. ಆದರೆ, ವ್ಯಾಜ್ಯ ಇರುವುದರಿಂದ ಇನ್ನೂ ಪರಿಹಾರ ವಿತರಣೆ ಮಾಡಿಲ್ಲ. ಇದೆಲ್ಲವೂ ಗೊತ್ತಿದ್ದರೂ, ಕೆಐಎಡಿಬಿ ಅಧಿಕಾರಿಗಳು ಪರಿಹಾರ ವಿತರಣೆ ಮಾಡಿದ್ದಾರೆ’ ಎಂದು ದೂರುದಾರ ಯತೀಶ್ ದೂರುತ್ತಾರೆ.</p>.<p>‘ಈಗಾಗಲೇ ಪರಿಹಾರ ಪಡೆದಿರುವವರು ಬಾಡಿಗೆಗೆ ಇರುವ ಜಾಗಕ್ಕೂ ಮೆಟ್ರೊ ರೈಲು ಮಾರ್ಗಕ್ಕೂ ಸಂಬಂಧವೇ ಇಲ್ಲ. ರಸ್ತೆಯ ಒಂದು ಬದಿಯಲ್ಲಿ ಮೆಟ್ರೊ ರೈಲು ಮಾರ್ಗವಿದ್ದರೆ, ಇನ್ನೊಂದು ಬದಿಯಲ್ಲಿ ಈ ಶೆಡ್ಗಳಿವೆ. ಆದರೂ, ಪರಿಹಾರ ನೀಡಲಾಗಿದೆ’ ಎಂದು ಅವರು ಆರೋಪಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ(ಮೆಟ್ರೊ) ಪ್ರಸನ್ನಕುಮಾರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ, ಅವರು ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ದಾಖಲೆಗಳನ್ನು ಪರಿಶೀಲಿಸದೆ ₹4.06 ಕೋಟಿ ಪರಿಹಾರ ವಿತರಿಸಿದ ಆರೋಪದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಅಧಿಕಾರಿಗಳು ಸೇರಿ ಐವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<p>ಮಟ್ರೊ ರೈಲು ಮಾರ್ಗ ನಿರ್ಮಾಣಕ್ಕೆ ಬೆನ್ನಿಗಾನಹಳ್ಳಿ ಗ್ರಾಮದ ಸರ್ವೆ ನಂಬರ್ 83/2ರ ಜಾಗದ ವ್ಯಾಜ್ಯ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಇತ್ಯರ್ಥಗೊಂಡಿತ್ತು. ಆದರೆ, ಆ ಜಾಗ ಬಾಡಿಗೆಗೆ ಪಡೆದಿದ್ದ ವ್ಯಕ್ತಿಯೊಬ್ಬರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಅದು ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿದೆ.</p>.<p>ಇದೇ ಸರ್ವೆ ನಂಬರ್ನಲ್ಲಿ 142.56 ಚದರ ಮೀಟರ್ ಜಾಗವನ್ನು ಮೆಟ್ರೊ ರೈಲು ಮಾರ್ಗಕ್ಕೆ ಸ್ವಾಧೀನಪಡಿಸಿಕೊಳ್ಳಲಾಗಿದೆ. ವ್ಯಾಜ್ಯ ಹೈಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿ ಇರುವುದರಿಂದ ಪರಿಹಾರ ವಿತರಣೆ ಮಾಡುವಾಗ ಎಚ್ಚರಿಕೆ ವಹಿಸುವಂತೆ ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿಗೆ(ಮೆಟ್ರೊ) ಬಿಎಂಆರ್ಸಿಎಲ್ ಪ್ರಧಾನ ವ್ಯವಸ್ಥಾಪಕ(ಭೂಸ್ವಾಧೀನ) ಎಂ.ಎಸ್.ಚನ್ನಪ್ಪಗೌಡರ್ ಪತ್ರ ಬರೆದಿದ್ದರು.</p>.<p>ಪರಿಹಾರ ಪಡೆದಿದ್ದಾರೆ ಎನ್ನಲಾದ ತಿರುಮಲೇಶ್, ಮೊಹಮ್ಮದ್ ಮಜೇಕ್ ಅಹಮದ್, ಬಿ.ಎಂ.ಉದಯ್, ಬಿ.ಎಂ.ವಿನಯ್ ಅವರನ್ನು ಆರೋಪಿಗಳನ್ನಾಗಿಸಿ ಹಲಸೂರು ಗೇಟ್ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.</p>.<p>‘ನಕಲಿ ದಾಖಲೆ ಸೃಷ್ಟಿಸಿಕೊಂಡು ಕೆಐಎಡಿಬಿ ಅಧಿಕಾರಿಗಳೊಂದಿಗೆ ಶಾಮೀಲಾಗಿ ಪರಿಹಾರ ಪಡೆದು ಮೋಸ ಮಾಡಲಾಗಿದೆ’ ಎಂದು ಎಂ.ಯತೀಶ್ ನೀಡಿರುವ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<p>‘ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೂ ಇದೇ ಸರ್ವೆ ನಂಬರ್ನ ಜಾಗವನ್ನು ಸ್ವಾಧೀನ ಮಾಡಿಕೊಳ್ಳಲಾಗಿದೆ. ಆದರೆ, ವ್ಯಾಜ್ಯ ಇರುವುದರಿಂದ ಇನ್ನೂ ಪರಿಹಾರ ವಿತರಣೆ ಮಾಡಿಲ್ಲ. ಇದೆಲ್ಲವೂ ಗೊತ್ತಿದ್ದರೂ, ಕೆಐಎಡಿಬಿ ಅಧಿಕಾರಿಗಳು ಪರಿಹಾರ ವಿತರಣೆ ಮಾಡಿದ್ದಾರೆ’ ಎಂದು ದೂರುದಾರ ಯತೀಶ್ ದೂರುತ್ತಾರೆ.</p>.<p>‘ಈಗಾಗಲೇ ಪರಿಹಾರ ಪಡೆದಿರುವವರು ಬಾಡಿಗೆಗೆ ಇರುವ ಜಾಗಕ್ಕೂ ಮೆಟ್ರೊ ರೈಲು ಮಾರ್ಗಕ್ಕೂ ಸಂಬಂಧವೇ ಇಲ್ಲ. ರಸ್ತೆಯ ಒಂದು ಬದಿಯಲ್ಲಿ ಮೆಟ್ರೊ ರೈಲು ಮಾರ್ಗವಿದ್ದರೆ, ಇನ್ನೊಂದು ಬದಿಯಲ್ಲಿ ಈ ಶೆಡ್ಗಳಿವೆ. ಆದರೂ, ಪರಿಹಾರ ನೀಡಲಾಗಿದೆ’ ಎಂದು ಅವರು ಆರೋಪಿಸಿದರು.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ(ಮೆಟ್ರೊ) ಪ್ರಸನ್ನಕುಮಾರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಲಾಯಿತು. ಆದರೆ, ಅವರು ಕರೆ ಸ್ವೀಕರಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>