ಪ್ರಕರಣ ದಾಖಲಿಸಿಕೊಂಡು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಇನ್ಸ್ಪೆಕ್ಟರ್ ಟಿ.ಎಲ್. ಪ್ರವೀಣ್ ಕುಮಾರ್ ನೇತೃತ್ವದ ತಂಡ, ದುಷ್ಕರ್ಮಿಗಳ ಜಾಡು ಪತ್ತೆ ಹಚ್ಚಿತ್ತು. ಪೊಲೀಸರು ಬೆನ್ನುಬಿದ್ದ ಮಾಹಿತಿ ಸಿಕ್ಕಿದ ದುಷ್ಕರ್ಮಿಗಳು, ಮಲ್ಲೇಶ್ವರದಲ್ಲಿರುವ ಕಾರ್ಮಿಕ ದಂಪತಿ ಬಳಿ ಮಗುವನ್ನು ಬಿಟ್ಟು ಪರಾರಿಯಾಗಿದ್ದರು. ತಲೆಮರೆಸಿಕೊಂಡಿರುವ ದುಷ್ಕರ್ಮಿಗಳ ಸುಳಿವು ಸಿಕ್ಕಿದ್ದು, ಬಂಧನಕ್ಕೆ ಕ್ರಮ ವಹಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.