‘ಸ್ಥಳೀಯ ನಿವಾಸಿಯಾದ ಕೃಷ್ಣ, ಸುಲಿಗೆ, ಕಳ್ಳತನ ಹಾಗೂ ಅಪಹರಣ ಸೇರಿದಂತೆ 11 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ತನ್ನದೇ ಗ್ಯಾಂಗ್ ಕಟ್ಟಿಕೊಂಡು ಶ್ರೀಮಂತರ ಮಕ್ಕಳನ್ನು ಅಪಹರಿಸಿ ಹಣ ಕಿತ್ತುಕೊಳ್ಳುತ್ತಿದ್ದ. ಆತನನ್ನು ಕಾಲಿಗೆ ಗುಂಡು ಹಾರಿಸಿ ಬುಧವಾರ ಬಂಧಿಸಲಾಗಿದೆ. ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.