‘ಪ್ರಕರಣದ ಪ್ರಮುಖ ಆರೋಪಿಗಳಾದ ವಂಶಿಕೃಷ್ಣ, ವಿನೋದ್ ನಾಯ್ಕ್ ಹಾಗೂ ಕಿರಣ್ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಪ್ರಕರಣದ ತನಿಖೆ ಮುಂದುವರಿಸಿದ್ದ ಪೊಲೀಸರು, ಪ್ರಮುಖ ಆರೋಪಿಗಳಿಗೆ ಪಿಎಸ್ಐ ಹಾಗೂ ಇತರರು ಸಹಕಾರ ನೀಡಿದ್ದನ್ನು ಪತ್ತೆ ಮಾಡಿದ್ದರು. ನಂತರ, ಪ್ರಕರಣದ ತನಿಖೆಯನ್ನು ಕಮಿಷನರ್ ಅವರು ಸಿಸಿಬಿಗೆ ವರ್ಗಾಯಿಸಿದ್ದರು. ಕಾರ್ಯಾಚರಣೆ ನಡೆಸಿ ಪಿಎಸ್ಐ, ಕಾನ್ಸ್ಟೆಬಲ್ ಹಾಗೂ ಇತರರನ್ನು ಇದೀಗ ಬಂಧಿಸಲಾಗಿದೆ’ ಎಂದು ತಿಳಿಸಿದರು.