‘ಬಾಗಲೂರಿನ ಮೆಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ನಲ್ಲಿ ರೌಡಿಶೀಟರ್ ಮುಜಾಮಿಲ್, ಹಫ್ತಾ ವಸೂಲಿಗೆ ಮುಂದಾಗಿದ್ದ. ತನ್ನ ಸಹಚರರಿಗೆ ಹಫ್ತಾ ಕೊಡಲು ನಿರಾಕರಿಸಿದ್ದ ಗುಜರಿ ವ್ಯಾಪಾರಿಯನ್ನು ಅಪಹರಿಸಲು ಸಂಚು ರೂಪಿಸಿದ್ದ. ಮಧ್ಯರಾತ್ರಿ ಕಾರಿನಲ್ಲಿ ಬಂದಿದ್ದ ಆರೋಪಿಗಳು, ಪೊಲೀಸರ ಸೋಗಿನಲ್ಲಿ ಕಾರಿಗೆ ಗುಜರಿ ವ್ಯಾಪಾರಿಯನ್ನು ಹತ್ತಿಸಿಕೊಂಡಿದ್ದರು. ಕಾರು ಸ್ವಲ್ಪ ದೂರಕ್ಕೆ ಚಲಿಸಿದ ಮೇಲೆ ಗುಜರಿ ವ್ಯಾಪಾರಿಗೆ ಅನುಮಾನ ಮೂಡಿತ್ತು. ಕಾರಿನಿಂದ ಇಳಿದು ತಪ್ಪಿಸಿಕೊಳ್ಳಲು ಮುಂದಾಗಿದ್ದರು. ಆರೋಪಿಗಳು, ವ್ಯಾಪಾರಿಯನ್ನು ಅಟ್ಟಿಸಿಕೊಂಡು ಹೋದರು. ಅದೇ ರಸ್ತೆಯಲ್ಲಿ ಗಸ್ತಿನಲ್ಲಿದ ಅಸಲಿ ಪೊಲೀಸರು, ವ್ಯಾಪಾರಿಯನ್ನು ರಕ್ಷಿಸಿ ಮೂವರನ್ನು ಬಂಧಿಸಿದ್ದರು’ ಎಂದು ಮೂಲಗಳು ಹೇಳಿವೆ.