‘ಕ್ಯಾನ್ಸರ್ಗೆ ಸಂಬಂಧಿಸಿದಂತೆ ಅಷ್ಟಾಗಿ ಸಂಶೋಧನೆಗಳು ನಡೆಯುತ್ತಿಲ್ಲ. ಹಾಗಾಗಿ, ನಗರದ ಹೊರವಲಯದಲ್ಲಿ 100 ಎಕರೆ ಜಮೀನು ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಅಲ್ಲಿ ಕ್ಯಾನ್ಸರ್ಗೆ ಸಂಬಂಧಿಸಿದ ಸಂಶೋಧನೆಗಳನ್ನು ನಡೆಸಲು ಯೋಜನೆ ರೂಪಿಸಲಾಗಿದೆ. ಚಿಕಿತ್ಸೆ ಸಂಬಂಧ ಸಂಸ್ಥೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚುತ್ತಿದ್ದು, ರೋಗಿಗಳ ದಟ್ಟಣೆ ನಿಯಂತ್ರಿಸುವುದು ಸವಾಲಾಗಿದೆ. ಪ್ರತಿನಿತ್ಯ 1,200ರಿಂದ 1,500 ಹೊರರೋಗಿಗಳು ಬರುತ್ತಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ನಾಲ್ಕು ವಿಭಾಗಗಳಲ್ಲಿ ಸಂಸ್ಥೆಯ ಶಾಖೆ ತೆರೆಯಲು ಕೂಡ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಬಾರಿಯ ಬಜೆಟ್ನಲ್ಲಿ ನಮ್ಮ ಬೇಡಿಕೆಗಳು ಈಡೇರುವ ನಿರೀಕ್ಷೆಯಿದೆ’ ಎಂದು ಹೇಳಿದರು.