<p><strong>ಬೆಂಗಳೂರು</strong>: ‘ವಿಲ್ಮ್ಸ್ ಟ್ಯೂಮರ್’ (ನೆಫ್ರೋಬ್ಲಾಸ್ಟೊಮಾ) ಎಂಬ ಅಪರೂಪದ ಮೂತ್ರಪಿಂಡ ಕ್ಯಾನ್ಸರ್ನಿಂದ ಬಳಲುತ್ತಿದ್ದ ಒಂಬತ್ತು ವರ್ಷದ ಬಾಲಕನಿಗೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಅಸ್ಥಿಮಜ್ಜೆ ಕಸಿ ನಡೆಸಲಾಗಿದೆ. ಇದು ಮಗುವಿನ ಚೇತರಿಕೆಗೆ ನೆರವಾಗಿದೆ. </p>.<p>‘2022ರ ಡಿಸೆಂಬರ್ನಲ್ಲಿ ಈ ಕ್ಯಾನ್ಸರ್ ಬಾಲಕನಲ್ಲಿ ಪತ್ತೆಯಾಗಿತ್ತು. ಕಿಮೋಥೆರಪಿ ಚಿಕಿತ್ಸೆ ನೀಡಿ ಎಡ ಮೂತ್ರಪಿಂಡಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ರೇಡಿಯೇಷನ್ ಚಿಕಿತ್ಸೆ ಒದಗಿಸಲಾಗಿತ್ತು. ದುರದೃಷ್ಟವಶಾತ್ 2025ರ ಏಪ್ರಿಲ್ನಲ್ಲಿ ರೋಗ ಮರುಕಳಿಸಿತು. ಬಾಲಕ ಬದುಕುಳಿಯುವುದು ಕಷ್ಟಸಾಧ್ಯವಾಗಿತ್ತು. ಆ ಸಂದರ್ಭದಲ್ಲಿ ಕಿಮೋಥೆರಪಿ ಮತ್ತು ಅಸ್ಥಿಮಜ್ಜೆ ಕಸಿಯ ಆಯ್ಕೆ ನಮ್ಮ ಮುಂದಿದ್ದವು. ಅದರಂತೆ ಅಸ್ಥಿಮಜ್ಜೆ ಕಸಿ ನಡೆಸಲಾಯಿತು’ ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ. </p>.<p>ಸಂಸ್ಥೆಯ ಅಸ್ಥಿಮಜ್ಜೆ ಕಸಿ ಘಟಕದ ಸಹ ಪ್ರಾಧ್ಯಾಪಕಿ ಡಾ. ವಸುಂಧರಾ ಕೈಲಾಸನಾಥ್, ‘ಚಿಕ್ಕ ವಯಸ್ಸಿನಲ್ಲಿಯೇ ಕಿಮೋಥೆರಪಿ ಚಿಕಿತ್ಸೆ, ಹೆಚ್ಚಿನ ಪ್ರಮಾಣದ ಬಿಎಂಟಿ ಔಷಧಗಳ ಅಗತ್ಯತೆ ಮತ್ತು ಕಾಯಿಲೆಯ ತೀವ್ರತೆಯು ಬಾಲಕನ ಜೀವಕ್ಕೆ ಅಪಾಯಕಾರಿಯಾಗಿತ್ತು. ಈ ಪ್ರಕರಣದ ನಿರ್ವಹಣೆ ಸವಾಲಿನಿಂದ ಕೂಡಿತ್ತು’ ಎಂದು ಹೇಳಿದ್ದಾರೆ. </p>.<p>ಸಂಸ್ಥೆಯ ನಿರ್ದೇಶಕ ಡಾ. ನವೀನ್ ಟಿ., ‘ಮೂರು ವರ್ಷಗಳ ಅವಧಿಯಲ್ಲಿ 130 ಅಸ್ಥಿಮಜ್ಜೆ ಕಸಿ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಬಾಲಕನಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದ ವೈದ್ಯರ ತಂಡವನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಆರ್. ಪಾಟೀಲ ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ವಿಲ್ಮ್ಸ್ ಟ್ಯೂಮರ್’ (ನೆಫ್ರೋಬ್ಲಾಸ್ಟೊಮಾ) ಎಂಬ ಅಪರೂಪದ ಮೂತ್ರಪಿಂಡ ಕ್ಯಾನ್ಸರ್ನಿಂದ ಬಳಲುತ್ತಿದ್ದ ಒಂಬತ್ತು ವರ್ಷದ ಬಾಲಕನಿಗೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಅಸ್ಥಿಮಜ್ಜೆ ಕಸಿ ನಡೆಸಲಾಗಿದೆ. ಇದು ಮಗುವಿನ ಚೇತರಿಕೆಗೆ ನೆರವಾಗಿದೆ. </p>.<p>‘2022ರ ಡಿಸೆಂಬರ್ನಲ್ಲಿ ಈ ಕ್ಯಾನ್ಸರ್ ಬಾಲಕನಲ್ಲಿ ಪತ್ತೆಯಾಗಿತ್ತು. ಕಿಮೋಥೆರಪಿ ಚಿಕಿತ್ಸೆ ನೀಡಿ ಎಡ ಮೂತ್ರಪಿಂಡಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ರೇಡಿಯೇಷನ್ ಚಿಕಿತ್ಸೆ ಒದಗಿಸಲಾಗಿತ್ತು. ದುರದೃಷ್ಟವಶಾತ್ 2025ರ ಏಪ್ರಿಲ್ನಲ್ಲಿ ರೋಗ ಮರುಕಳಿಸಿತು. ಬಾಲಕ ಬದುಕುಳಿಯುವುದು ಕಷ್ಟಸಾಧ್ಯವಾಗಿತ್ತು. ಆ ಸಂದರ್ಭದಲ್ಲಿ ಕಿಮೋಥೆರಪಿ ಮತ್ತು ಅಸ್ಥಿಮಜ್ಜೆ ಕಸಿಯ ಆಯ್ಕೆ ನಮ್ಮ ಮುಂದಿದ್ದವು. ಅದರಂತೆ ಅಸ್ಥಿಮಜ್ಜೆ ಕಸಿ ನಡೆಸಲಾಯಿತು’ ಎಂದು ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ. </p>.<p>ಸಂಸ್ಥೆಯ ಅಸ್ಥಿಮಜ್ಜೆ ಕಸಿ ಘಟಕದ ಸಹ ಪ್ರಾಧ್ಯಾಪಕಿ ಡಾ. ವಸುಂಧರಾ ಕೈಲಾಸನಾಥ್, ‘ಚಿಕ್ಕ ವಯಸ್ಸಿನಲ್ಲಿಯೇ ಕಿಮೋಥೆರಪಿ ಚಿಕಿತ್ಸೆ, ಹೆಚ್ಚಿನ ಪ್ರಮಾಣದ ಬಿಎಂಟಿ ಔಷಧಗಳ ಅಗತ್ಯತೆ ಮತ್ತು ಕಾಯಿಲೆಯ ತೀವ್ರತೆಯು ಬಾಲಕನ ಜೀವಕ್ಕೆ ಅಪಾಯಕಾರಿಯಾಗಿತ್ತು. ಈ ಪ್ರಕರಣದ ನಿರ್ವಹಣೆ ಸವಾಲಿನಿಂದ ಕೂಡಿತ್ತು’ ಎಂದು ಹೇಳಿದ್ದಾರೆ. </p>.<p>ಸಂಸ್ಥೆಯ ನಿರ್ದೇಶಕ ಡಾ. ನವೀನ್ ಟಿ., ‘ಮೂರು ವರ್ಷಗಳ ಅವಧಿಯಲ್ಲಿ 130 ಅಸ್ಥಿಮಜ್ಜೆ ಕಸಿ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ’ ಎಂದು ತಿಳಿಸಿದ್ದಾರೆ.</p>.<p>ಬಾಲಕನಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿದ ವೈದ್ಯರ ತಂಡವನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಆರ್. ಪಾಟೀಲ ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>