<p><strong>ಬೆಂಗಳೂರು:</strong> ನಗರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ರೌಡಿ ಸೇರಿ ಇಬ್ಬರನ್ನು ಶುಕ್ರವಾರ ಕೊಲೆ ಮಾಡಲಾಗಿದೆ.</p>.<p>ಫ್ಲವರ್ ಗಾರ್ಡನ್ನ ರೌಡಿ ಶಿವ ಅಲಿಯಾಸ್ ಶರತ್ (35) ಹಾಗೂ ಶ್ರೀನಗರದ ಯೋಗೇಶ್ (23) ಕೊಲೆ ಯಾದವರು.</p>.<p>ಕಾಟನ್ಪೇಟೆ ಹಾಗೂ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.</p>.<p>‘ನೃತ್ಯ ಮಾಡುವ ಸಂದರ್ಭದಲ್ಲಿ ಮೈ ತಾಗಿದ್ದಕ್ಕೆ ಶುರುವಾದ ಗಲಾಟೆ, ಯೋಗೇಶ್ ಅವರ ಕೊಲೆಯಲ್ಲಿ ಅಂತ್ಯವಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬೈಕ್ ರಿಪೇರಿ ಹಾಗೂ ತೊಳೆಯುವ ಕೆಲಸ ಮಾಡುತ್ತಿದ್ದ ಯೋಗೇಶ್, ಗಿರಿನಗರ ಬಳಿಯ ದೇವಸ್ಥಾನ<br>ವೊಂದರಲ್ಲಿ ಶಿವರಾತ್ರಿ ಪೂಜೆಗೆ ಶುಕ್ರವಾರ ಹೋಗಿದ್ದರು. ಸ್ಥಳೀಯ ಯುವಕರು ನೃತ್ಯ ಮಾಡುತ್ತಿದ್ದರು. ಯೋಗೇಶ್ ಸಹ ನೃತ್ಯ ಮಾಡಲಾ<br>ರಂಭಿಸಿದ್ದರು. ಇದೇ ಸಂದರ್ಭದಲ್ಲಿ ಆರೋಪಿಯೊಬ್ಬನಿಗೆ ಯೋಗೇಶ್ ಅವರ ಮೈ ತಾಗಿತ್ತು’ ಎಂದು ತಿಳಿಸಿದರು.</p>.<p>‘ಮೈ ತಾಗಿದ್ದ ಕಾರಣಕ್ಕೆ ಜಗಳ ಶುರುವಾಗಿತ್ತು. ಯೋಗೇಶ್ ಹಾಗೂ ಆರೋಪಿಗಳು ಪರಸ್ಪರ ಕೈ ಕೈ ಮಿಲಾ ಯಿಸಿದ್ದರು. ಸ್ಥಳೀಯರು ಜಗಳ ಬಿಡಿಸಿ ಎಲ್ಲರನ್ನೂ ಸ್ಥಳದಿಂದ ಕಳುಹಿಸಿದ್ದರು’ ಎಂದರು.</p>.<p>‘ಯೋಗೇಶ್ ಬೈಕ್ನಲ್ಲಿ ತಮ್ಮ ಮನೆ ಯತ್ತ ಹೊರಟಿದ್ದರು. ಈ ಸಂದರ್ಭದಲ್ಲಿ ಹಿಂಬಾಲಿಸಿದ್ದ ಆರೋಪಿಗಳು, ಮಾರ್ಗಮಧ್ಯೆ ಯೋಗೇಶ್ ಬೈಕ್ ಅಡ್ಡಗಟ್ಟಿದ್ದರು. ಚಾಕುವಿನಿಂದ ಇರಿದು ಯೋಗೇಶ್ ಅವರನ್ನು ಕೊಂದಿದ್ದಾರೆ’ ಎಂದು ಹೇಳಿದರು.</p>.<p>‘ನೃತ್ಯ ಮಾಡುವಾಗ ನಡೆದ ಗಲಾಟೆಯಿಂದ ಕೊಲೆ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p><strong>ರೌಡಿಯ ಕೊಲೆ</strong></p>.<p>‘ರೌಡಿ ಶಿವ ಹಾಗೂ ಎದುರಾಳಿ ತಂಡದವರ ನಡುವೆ ವೈಷಮ್ಯ ಇತ್ತು. ಸ್ಥಳೀಯ ವ್ಯಾಪಾರಿಗಳನ್ನು ಶಿವ ಬೆದರಿಸು ತ್ತಿದ್ದನೆಂದು ಗೊತ್ತಾಗಿತ್ತು. ಇದೇ ಕಾರ ಣಕ್ಕೆ ಎದುರಾಳಿ ತಂಡದವರು ಶಿವನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿ ದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ರೌಡಿ ಶಿವ ಶುಕ್ರವಾರ ತಡರಾತ್ರಿ ಆಂಜನಪ್ಪ ಗಾರ್ಡನ್ಗೆ ಹೋಗಿದ್ದ. ಇದೇ ಸಂದರ್ಭದಲ್ಲಿ ದಾಳಿ ಮಾಡಿದ್ದ ದುಷ್ಕರ್ಮಿಗಳ ತಂಡ, ಶಿವನನ್ನು ಕೊಲೆ ಮಾಡಿ ಪರಾರಿಯಾಗಿದೆ. ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ಸ್ಥಳೀಯ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿ<br>ಸಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ರೌಡಿ ಸೇರಿ ಇಬ್ಬರನ್ನು ಶುಕ್ರವಾರ ಕೊಲೆ ಮಾಡಲಾಗಿದೆ.</p>.<p>ಫ್ಲವರ್ ಗಾರ್ಡನ್ನ ರೌಡಿ ಶಿವ ಅಲಿಯಾಸ್ ಶರತ್ (35) ಹಾಗೂ ಶ್ರೀನಗರದ ಯೋಗೇಶ್ (23) ಕೊಲೆ ಯಾದವರು.</p>.<p>ಕಾಟನ್ಪೇಟೆ ಹಾಗೂ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.</p>.<p>‘ನೃತ್ಯ ಮಾಡುವ ಸಂದರ್ಭದಲ್ಲಿ ಮೈ ತಾಗಿದ್ದಕ್ಕೆ ಶುರುವಾದ ಗಲಾಟೆ, ಯೋಗೇಶ್ ಅವರ ಕೊಲೆಯಲ್ಲಿ ಅಂತ್ಯವಾಗಿದೆ’ ಎಂದು ಪೊಲೀಸರು ಹೇಳಿದರು.</p>.<p>‘ಬೈಕ್ ರಿಪೇರಿ ಹಾಗೂ ತೊಳೆಯುವ ಕೆಲಸ ಮಾಡುತ್ತಿದ್ದ ಯೋಗೇಶ್, ಗಿರಿನಗರ ಬಳಿಯ ದೇವಸ್ಥಾನ<br>ವೊಂದರಲ್ಲಿ ಶಿವರಾತ್ರಿ ಪೂಜೆಗೆ ಶುಕ್ರವಾರ ಹೋಗಿದ್ದರು. ಸ್ಥಳೀಯ ಯುವಕರು ನೃತ್ಯ ಮಾಡುತ್ತಿದ್ದರು. ಯೋಗೇಶ್ ಸಹ ನೃತ್ಯ ಮಾಡಲಾ<br>ರಂಭಿಸಿದ್ದರು. ಇದೇ ಸಂದರ್ಭದಲ್ಲಿ ಆರೋಪಿಯೊಬ್ಬನಿಗೆ ಯೋಗೇಶ್ ಅವರ ಮೈ ತಾಗಿತ್ತು’ ಎಂದು ತಿಳಿಸಿದರು.</p>.<p>‘ಮೈ ತಾಗಿದ್ದ ಕಾರಣಕ್ಕೆ ಜಗಳ ಶುರುವಾಗಿತ್ತು. ಯೋಗೇಶ್ ಹಾಗೂ ಆರೋಪಿಗಳು ಪರಸ್ಪರ ಕೈ ಕೈ ಮಿಲಾ ಯಿಸಿದ್ದರು. ಸ್ಥಳೀಯರು ಜಗಳ ಬಿಡಿಸಿ ಎಲ್ಲರನ್ನೂ ಸ್ಥಳದಿಂದ ಕಳುಹಿಸಿದ್ದರು’ ಎಂದರು.</p>.<p>‘ಯೋಗೇಶ್ ಬೈಕ್ನಲ್ಲಿ ತಮ್ಮ ಮನೆ ಯತ್ತ ಹೊರಟಿದ್ದರು. ಈ ಸಂದರ್ಭದಲ್ಲಿ ಹಿಂಬಾಲಿಸಿದ್ದ ಆರೋಪಿಗಳು, ಮಾರ್ಗಮಧ್ಯೆ ಯೋಗೇಶ್ ಬೈಕ್ ಅಡ್ಡಗಟ್ಟಿದ್ದರು. ಚಾಕುವಿನಿಂದ ಇರಿದು ಯೋಗೇಶ್ ಅವರನ್ನು ಕೊಂದಿದ್ದಾರೆ’ ಎಂದು ಹೇಳಿದರು.</p>.<p>‘ನೃತ್ಯ ಮಾಡುವಾಗ ನಡೆದ ಗಲಾಟೆಯಿಂದ ಕೊಲೆ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡು, ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ತಿಳಿಸಿದರು.</p>.<p><strong>ರೌಡಿಯ ಕೊಲೆ</strong></p>.<p>‘ರೌಡಿ ಶಿವ ಹಾಗೂ ಎದುರಾಳಿ ತಂಡದವರ ನಡುವೆ ವೈಷಮ್ಯ ಇತ್ತು. ಸ್ಥಳೀಯ ವ್ಯಾಪಾರಿಗಳನ್ನು ಶಿವ ಬೆದರಿಸು ತ್ತಿದ್ದನೆಂದು ಗೊತ್ತಾಗಿತ್ತು. ಇದೇ ಕಾರ ಣಕ್ಕೆ ಎದುರಾಳಿ ತಂಡದವರು ಶಿವನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದಿ ದ್ದಾರೆ’ ಎಂದು ಪೊಲೀಸರು ಹೇಳಿದರು.</p>.<p>‘ರೌಡಿ ಶಿವ ಶುಕ್ರವಾರ ತಡರಾತ್ರಿ ಆಂಜನಪ್ಪ ಗಾರ್ಡನ್ಗೆ ಹೋಗಿದ್ದ. ಇದೇ ಸಂದರ್ಭದಲ್ಲಿ ದಾಳಿ ಮಾಡಿದ್ದ ದುಷ್ಕರ್ಮಿಗಳ ತಂಡ, ಶಿವನನ್ನು ಕೊಲೆ ಮಾಡಿ ಪರಾರಿಯಾಗಿದೆ. ಕೊಲೆ ಸಂಬಂಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ. ಸ್ಥಳೀಯ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯ ಪರಿಶೀಲಿ<br>ಸಲಾಗುತ್ತಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>