<p><strong>ಬೆಂಗಳೂರು:</strong> ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದ ಪ್ರಥಮ ಅನಿಲ ಆಧಾರಿತ 370 ಮೆಗಾವಾಟ್ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಘಟಕ’ವನ್ನು (ವೈಸಿಸಿಪಿ) ಜುಲೈ ಎರಡನೇ ವಾರದಲ್ಲಿ ಉದ್ಘಾಟಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದರು.</p>.<p>ಬುಧವಾರ ನಡೆದ ವೈಸಿಸಿಪಿ ಯೋಜನೆ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಯೋಜನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ‘2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕ ಸಂಯುಕ್ತ ಆವರ್ತಕ ವಿದ್ಯುತ್ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಅವರೇ ಉದ್ಘಾಟಿಸಲಿದ್ದಾರೆ’ ಎಂದರು.</p>.<p><strong>ಬಿಡದಿ ಯೋಜನೆಯೂ ಉದ್ಘಾಟನೆ: </strong>ಇದೇ ವೇಳೆ ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ‘ಜುಲೈ ಕೊನೆಯ ವಾರದಲ್ಲಿ ಈ ಘಟಕವನ್ನು ಲೋಕಾರ್ಪಣೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಕೆಪಿಸಿಎಲ್ ಮತ್ತು ಬಿಬಿಎಂಪಿ ಸಹಯೋಗದಲ್ಲಿ ಆರಂಭವಾಗಿರುವ ₹250 ಕೋಟಿ ವೆಚ್ಚದ 600 ಟನ್ ತ್ಯಾಜ್ಯ ಸಂಸ್ಕರಿಸಿ 11.5 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಘಟಕದ ಎಲ್ಲ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ.</p>.<p>ಪ್ರಾಯೋಗಿಕವಾಗಿ ವಿದ್ಯುತ್ ಉತ್ಪಾದನೆ ಆರಂಭಿಸಿ, ಜುಲೈ ಕೊನೆ ವಾರದಲ್ಲಿ ಉದ್ಘಾಟನೆಗೆ ಸಜ್ಜುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಸಿಎಲ್ನ ಹಣಕಾಸು ನಿರ್ದೇಶಕ ಆರ್.ನಾಗರಾಜ್, ತಾಂತ್ರಿಕ ನಿರ್ದೇಶಕ ಸಿ.ಎಂ.ದಿವಾಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಯಲಹಂಕ ಸಮೀಪ ಸ್ಥಾಪನೆಯಾಗಿರುವ ರಾಜ್ಯದ ಪ್ರಥಮ ಅನಿಲ ಆಧಾರಿತ 370 ಮೆಗಾವಾಟ್ ಸಾಮರ್ಥ್ಯದ ‘ಯಲಹಂಕ ಸಂಯೋಜಿತ ಆವರ್ತ ವಿದ್ಯುತ್ ಘಟಕ’ವನ್ನು (ವೈಸಿಸಿಪಿ) ಜುಲೈ ಎರಡನೇ ವಾರದಲ್ಲಿ ಉದ್ಘಾಟಿಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಸೂಚಿಸಿದರು.</p>.<p>ಬುಧವಾರ ನಡೆದ ವೈಸಿಸಿಪಿ ಯೋಜನೆ ಕುರಿತ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಯೋಜನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು, ‘2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಲಹಂಕ ಸಂಯುಕ್ತ ಆವರ್ತಕ ವಿದ್ಯುತ್ ಸ್ಥಾವರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈಗ ಅವರೇ ಉದ್ಘಾಟಿಸಲಿದ್ದಾರೆ’ ಎಂದರು.</p>.<p><strong>ಬಿಡದಿ ಯೋಜನೆಯೂ ಉದ್ಘಾಟನೆ: </strong>ಇದೇ ವೇಳೆ ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ‘ಜುಲೈ ಕೊನೆಯ ವಾರದಲ್ಲಿ ಈ ಘಟಕವನ್ನು ಲೋಕಾರ್ಪಣೆ ಮಾಡಲಾಗುವುದು’ ಎಂದು ತಿಳಿಸಿದರು.</p>.<p>ಕೆಪಿಸಿಎಲ್ ಮತ್ತು ಬಿಬಿಎಂಪಿ ಸಹಯೋಗದಲ್ಲಿ ಆರಂಭವಾಗಿರುವ ₹250 ಕೋಟಿ ವೆಚ್ಚದ 600 ಟನ್ ತ್ಯಾಜ್ಯ ಸಂಸ್ಕರಿಸಿ 11.5 ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಘಟಕದ ಎಲ್ಲ ಕಾಮಗಾರಿಗಳು ಬಹುತೇಕ ಪೂರ್ಣಗೊಂಡಿವೆ.</p>.<p>ಪ್ರಾಯೋಗಿಕವಾಗಿ ವಿದ್ಯುತ್ ಉತ್ಪಾದನೆ ಆರಂಭಿಸಿ, ಜುಲೈ ಕೊನೆ ವಾರದಲ್ಲಿ ಉದ್ಘಾಟನೆಗೆ ಸಜ್ಜುಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಕೆಪಿಸಿಎಲ್ನ ಹಣಕಾಸು ನಿರ್ದೇಶಕ ಆರ್.ನಾಗರಾಜ್, ತಾಂತ್ರಿಕ ನಿರ್ದೇಶಕ ಸಿ.ಎಂ.ದಿವಾಕರ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>