‘ಕೋವಿಡ್-19 ರಿಂದಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರುಕಟ್ಟೆ ಕುಸಿದಿರುವ ಕಾರಣ ಹಾಲಿನ ಪುಡಿ,
ಬೆಣ್ಣೆ, ತುಪ್ಪ ಮುಂತಾದ ಉತ್ಪನ್ನಗಳು ಹೆಚ್ಚಿನ ಪ್ರಮಾಣದಲ್ಲಿ ದಾಸ್ತಾನಾಗಿ ಹದಗೆಡುವ ಅಪಾಯವಿದೆ. ಇದರಿಂದಾಗಿ ಈ ವಲಯವು ಸಂಕಷ್ಟಕ್ಕೆ ಈಡಾಗುವ ಸಾಧ್ಯತೆ ಇತ್ತು. ಇದನ್ನು ಅರಿತು ಕೂಡಲೇ ನೆರವು ಘೋಷಿಸಿರುವ ಕೇಂದ್ರ ಸರ್ಕಾರಕ್ಕೆ ವಂದನೆಗಳು’ ಎಂದು ಕೆಎಂಎಫ್ ಪ್ರಕಟಣೆಯಲ್ಲಿ ತಿಳಿಸಿದೆ.