ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಕಿಪೊಟ್ಟಣ ನೀಡದಿದ್ದಕ್ಕೆ ಆಟೊ ಚಾಲಕನಿಗೆ ಚಾಕು ಇರಿತ

Last Updated 21 ಮಾರ್ಚ್ 2023, 22:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಕಿಪೊಟ್ಟಣ ನೀಡಲಿಲ್ಲವೆಂಬ ಕಾರಣಕ್ಕೆ ಆಟೊ ಚಾಲಕ ಸರ್ದಾರ್ ಎಂಬುವವರಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಲಾಗಿದ್ದು, ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸ್ಥಳೀಯ ಜಾನಕಿರಾಮ್ ಬಡಾವಣೆ ನಿವಾಸಿ ಸರ್ದಾರ್ ಅವರು ಘಟನೆ ಬಗ್ಗೆ ದೂರು ನೀಡಿದ್ದಾರೆ. ಕೃತ್ಯದ ನಂತರ ಆರೋಪಿ ಪರಾರಿಯಾಗಿದ್ದು, ಆತನನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

‘ಸರ್ದಾರ್ ಅವರು ಆಟೊ ಚಲಾಯಿಸಿಕೊಂಡು ಮನೆ ಸಮೀಪದಲ್ಲಿ ಸೋಮವಾರ ಸಂಜೆ ಹೊರಟಿದ್ದರು. ಯುವತಿ ಜೊತೆ ಬೈಕ್‌ನಲ್ಲಿ ಹೊರಟಿದ್ದ ಯುವಕನೊಬ್ಬ, ಆಟೊ ಅಡ್ಡಗಟ್ಟಿದ್ದ. ಸಿಗರೇಟ್‌ ಸೇದಲು ಬೆಂಕಿ ಪೊಟ್ಟಣ ನೀಡುವಂತೆ ಕೇಳಿದ್ದ. ತಮ್ಮ ಬಳಿ ಇಲ್ಲವೆಂದು ಸರ್ದಾರ್ ಹೇಳಿದ್ದರು.’

‘ಕೋಪಗೊಂಡಿದ್ದ ಆರೋಪಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಬಳಿಕ, ಸರ್ದಾರ್ ಅವರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿರುವ ಸರ್ದಾರ್ ಚೇತರಿಸಿಕೊಳ್ಳುತ್ತಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT