ಕರ್ನಾಟಕ ರಾಜ್ಯ ಔಷಧಿ ಗಿಡ ಮೂಲಿಕಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುದರ್ಶನ್.ಜಿ.ಎ ಮಾತನಾಡಿ, ‘ದೈನಂದಿನ ಜೀವನದಲ್ಲಿ ಔಷಧೀಯ ಸಸ್ಯಗಳ ಬಳಕೆ ಮಾಡಲಾಗುತ್ತದೆ. ಆಯರ್ವೇದ, ಯುನಾನಿ ಮತ್ತು ಸಿದ್ಧ ಸೇರಿದಂತೆ ವಿವಿಧ ಸಾಂಪ್ರದಾಯಿಕ ವೈದ್ಯಕೀಯ ಪದ್ದತಿಗಳಲ್ಲಿ ಇವುಗಳ ಬಳಕೆ ಹೆಚ್ಚಿನ ಪ್ರಮಾಣದಲ್ಲಿ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.