ಬೆಂಗಳೂರು: ಯುವಜನತೆಗೆ ವಿಶ್ವದರ್ಜೆ ತರಬೇತಿ ನೀಡುವ ಜ್ಞಾನ ನಗರಿಯನ್ನು ದೇಶದಲ್ಲಿ ಸ್ಥಾಪಿಸುವ ಅಗತ್ಯ ಇದೆ. ಈಗಾಗಲೇ ಐಟಿ, ವಿಜ್ಞಾನ, ಸ್ಟಾರ್ಟ್ಅಪ್ ರಾಜಧಾನಿ ಎಂದೇ ಗುರುತಿಸಿಕೊಂಡಿರುವ ಬೆಂಗಳೂರಿನಲ್ಲೇ ಇಂತಹ ಮೊದಲ ಕೇಂದ್ರ ತೆರೆಯಬೇಕು ಎಂದು ಮಾಜಿ ವಿದೇಶಾಂಗ ವ್ಯವಹಾರ ಸಚಿವ ಎಸ್.ಎಂ.ಕೃಷ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದಾರೆ.