ಬೆಳಿಗ್ಗೆಯಿಂದಲೇ ಸ್ವಾಮಿಗೆ ಅಭಿಷೇಕ, ಅರ್ಚನೆ, ಮಹಾನಿವೇದನೆ, ಮಹಾಮಂಗಳಾರತಿಯ ಪೂಜಾಕೈಂಕರ್ಯಗಳನ್ನು ನೆರವೇರಿಸಲಾಯಿತು. ಭಕ್ತರ ಜಯಘೋಷಗಳೊಂದಿಗೆ ಮಧ್ಯಾಹ್ನ 1.30ಕ್ಕೆ ರಥವನ್ನು ಎಳೆಯಲಾಯಿತು.ಸುತ್ತಮುತ್ತಲ ಗ್ರಾಮಗಳು, ಬೆಂಗಳೂರು ನಗರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರು, ಸ್ವಾಮಿಯ ದರ್ಶನ ಪಡೆದರು. ಬಾಳೆಹಣ್ಣು ಮತ್ತು ದವನದ ಸೊಪ್ಪನ್ನು ರಥದ ಮೇಲೆ ಎಸೆಯುವ ಮೂಲಕ ತಮ್ಮ ಹರಕೆ ತೀರಿಸಿದರು.