<p><strong>ರಾಜರಾಜೇಶ್ವರಿನಗರ:</strong> ಕೊಡಿಗೇಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗುವುದು ಖಚಿತ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಕೊಡಿಗೇಹಳ್ಳಿಯಲ್ಲಿ ಕೊಡಿಗೇಹಳ್ಳಿ ಗ್ರಾಮಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಗ್ರಾಮಪಂಚಾಯತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ’ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಗಳನ್ನು ಬಿಡಿಎ ವತಿಯಿಂದ ಸಮಗ್ರ ಅಭಿವೃದ್ಧಿ ಮಾಡಲಾಗುವುದು‘ ಎಂದರು.</p>.<p>ಮಾಗಡಿ ಮುಖ್ಯರಸ್ತೆಯಿಂದ ಕೊಡಿಗೇಹಳ್ಳಿ ಮೂಲಕ ಹೊಸಹಳ್ಳಿವರೆಗೆ ₹7ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿದೆ. ಜೊತೆಗೆ ₹3 ಕೋಟಿ ವೆಚ್ಚದಲ್ಲಿಯೂ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾ ಗುವುದು. ಬಿಡಿಎ ಮತ್ತು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.</p>.<p>ಗ್ರಾಮಪಂಚಾಯತಿ ಸದಸ್ಯರಭಿನಂದನಾ ಸಮಾರಂಭದಲ್ಲಿ ಬಿಜೆಪಿ ಮುಖಂಡ ಡಾ.ಎನ್.ನಂಜುಂಡೇಶ್, ಎಂ.ನಾಗರಾಜು, ಪಾಲಿಕೆ ಮಾಜಿ ಸದಸ್ಯ ರಾಜಣ್ಣ, ಪುಷ್ಪಲತಾ ಪುಟ್ಟರಾಜು, ಕನ್ನಲ್ಲಿ ಪುರುಷೋತ್ತಮ್, ಭಾಗ್ಯಮ್ಮ ಮುನಿಯಪ್ಪ, ಸಾಕಮ್ಮ, ಕೋಮಲ, ಸಿದ್ದಲಿಂಗಸ್ವಾಮಿ, ನಾಗರಾಜ್ ಎನ್, ಕುಮಾರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ:</strong> ಕೊಡಿಗೇಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಗೆ ಬರುವ ಎಲ್ಲ ಗ್ರಾಮಗಳು ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾಗುವುದು ಖಚಿತ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಕೊಡಿಗೇಹಳ್ಳಿಯಲ್ಲಿ ಕೊಡಿಗೇಹಳ್ಳಿ ಗ್ರಾಮಪಂಚಾಯತಿಗೆ ನೂತನವಾಗಿ ಆಯ್ಕೆಯಾದ ಗ್ರಾಮಪಂಚಾಯತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ’ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ವ್ಯಾಪ್ತಿಗೆ ಬರುವ ಎಲ್ಲ ಹಳ್ಳಿಗಳನ್ನು ಬಿಡಿಎ ವತಿಯಿಂದ ಸಮಗ್ರ ಅಭಿವೃದ್ಧಿ ಮಾಡಲಾಗುವುದು‘ ಎಂದರು.</p>.<p>ಮಾಗಡಿ ಮುಖ್ಯರಸ್ತೆಯಿಂದ ಕೊಡಿಗೇಹಳ್ಳಿ ಮೂಲಕ ಹೊಸಹಳ್ಳಿವರೆಗೆ ₹7ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಹಣ ಬಿಡುಗಡೆಯಾಗಿದೆ. ಜೊತೆಗೆ ₹3 ಕೋಟಿ ವೆಚ್ಚದಲ್ಲಿಯೂ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲಾ ಗುವುದು. ಬಿಡಿಎ ಮತ್ತು ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.</p>.<p>ಗ್ರಾಮಪಂಚಾಯತಿ ಸದಸ್ಯರಭಿನಂದನಾ ಸಮಾರಂಭದಲ್ಲಿ ಬಿಜೆಪಿ ಮುಖಂಡ ಡಾ.ಎನ್.ನಂಜುಂಡೇಶ್, ಎಂ.ನಾಗರಾಜು, ಪಾಲಿಕೆ ಮಾಜಿ ಸದಸ್ಯ ರಾಜಣ್ಣ, ಪುಷ್ಪಲತಾ ಪುಟ್ಟರಾಜು, ಕನ್ನಲ್ಲಿ ಪುರುಷೋತ್ತಮ್, ಭಾಗ್ಯಮ್ಮ ಮುನಿಯಪ್ಪ, ಸಾಕಮ್ಮ, ಕೋಮಲ, ಸಿದ್ದಲಿಂಗಸ್ವಾಮಿ, ನಾಗರಾಜ್ ಎನ್, ಕುಮಾರಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>