'ಶಂಕಿತರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಅವರು ನೀಡಿದ ಮಾಹಿತಿ ಆಧರಿಸಿ ಮತ್ತಷ್ಟು ಸ್ಥಳಗಳಲ್ಲಿ ಶೋಧ ನಡೆಸಲಾಯಿತು. ಕೊಡಿಗೇಹಳ್ಳಿ ಮನೆ ಮೇಲೂ ದಾಳಿ ನಡೆಸಲಾಯಿತು. ಅಲ್ಲಿಯೇ ಜೀವಂತ ಗ್ರೆನೇಡ್ಗಳು ಸಿಕ್ಕಿವೆ. ಅವುಗಳನ್ನು ಜಪ್ತಿ ಮಾಡಲಾಗಿದೆ.
ಶಂಕಿತರು, ದೊಡ್ಡದಾದ ರೀತಿಯಲ್ಲಿ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಮಾಹಿತಿ ಲಭ್ಯವಾಗಿದೆ. ತನಿಖೆ ಮುಂದುವರಿಸಲಾಗಿದೆ' ಎಂದು ಕಮಿಷನರ್ ಬಿ.ದಯಾನಂದ್ ಹೇಳಿದರು.