ಇದೇ ವೇಳೆ ಯಲಹಂಕ ತಹಶೀಲ್ದಾರ್ ನ್ಯಾಯಪೀಠಕ್ಕೆ ವರದಿ ಸಲ್ಲಿಸಿ, ‘ಒತ್ತುವರಿ ತೆರವುಗೊಳಿಸಲು ನೋಟಿಸ್ ಜಾರಿಗೊಳಿಸಿದ್ದು, ಕೆಲ ಒತ್ತುವರಿಯನ್ನು ಈಗಾಗಲೇ ತೆರವುಗೊಳಿಸಲಾಗಿದೆ’ ಎಂದು ತಿಳಿಸಿದರು.ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಒತ್ತುವರಿದಾರರ ಅಹವಾಲು ಆಲಿಸಿದ ನಂತರ ಮುಂದಿನ ತೀರ್ಮಾನ ಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಅವರಿಗೆ ನಿರ್ದೇಶಿಸಿತು.