<p><strong>ಬೆಂಗಳೂರು:</strong> ‘ಕೋಗಿಲು ಬಡಾವಣೆಯಲ್ಲಿನ ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಸಂತ್ರಸ್ತರಿಗೆ ಕಲ್ಪಿಸಲಾಗಿರುವ ಪುನರ್ವಸತಿ ಹಾಗೂ ನಿರ್ಗತಿಕರಾದವರ ಮಾಹಿತಿಯನ್ನು ಒಳಗೊಂಡ ಅಂತಿಮ ವರದಿ ಸಲ್ಲಿಸಲು ಪ್ರಕರಣದ ಅಮಿಕಸ್ ಕ್ಯೂರಿಗೆ ಏಪ್ರಿಲ್ 29ರವರೆಗೆ ಹೈಕೋರ್ಟ್ ಕಾಲಾವಕಾಶ ನೀಡಿದೆ.</p><p>‘ತೆರವು ಕಾರ್ಯಾಚರಣೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು, ಸಂತ್ರಸ್ತರಿಗೆ ಪುನರ್ವಸತಿ ಹಾಗೂ ಪರಿಹಾರ ನೀಡಲು ನಿರ್ದೇಶಿಸಬೇಕು’ ಎಂದು ಕೋರಿ ಈ ಪ್ರದೇಶದಲ್ಲಿ ವಾಸವಿದ್ದ ಝೈಬಾ ತಬಸ್ಸುಮ್, ರೆಹಾನ ಮತ್ತು ಅರೀಫಾ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ಅಮಿಕಸ್ ಕ್ಯೂರಿ ಬಿ.ವಿ.ವಿದ್ಯುಲ್ಲತಾ, ‘ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ್ದೆ. ಆದರೆ, ನಿರಾಶ್ರಿತರು ತಾವಿದ್ದ ಜಾಗ ತೊರೆದು ಪುನರ್ವಸತಿ ಕೇಂದ್ರಕ್ಕೆ ಹೋಗಲು ಇಷ್ಟಪಡುತ್ತಿಲ್ಲ. ಬಡಾವಣೆಯಲ್ಲಿಯೇ ಉಳಿದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಅಂತಿಮ ವರದಿಯನ್ನು ಎರಡು-ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ವಿವರಿಸಿದರು.</p><p>ಇದನ್ನು ಪರಿಗಣಿಸಿದ ನ್ಯಾಯಪೀಠ, ಪುನರ್ವಸತಿ ವ್ಯವಸ್ಥೆ ಕುರಿತಾದ ಅಂತಿಮ ವರದಿ ಸಲ್ಲಿಕೆಗೆ ಏಪ್ರಿಲ್ 29ರವರೆಗೆ ಗಡುವು ನೀಡಿ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಕೋಗಿಲು ಬಡಾವಣೆಯಲ್ಲಿನ ಅಕ್ರಮ ಮನೆಗಳ ತೆರವು ಕಾರ್ಯಾಚರಣೆಯಲ್ಲಿ ಸಂತ್ರಸ್ತರಿಗೆ ಕಲ್ಪಿಸಲಾಗಿರುವ ಪುನರ್ವಸತಿ ಹಾಗೂ ನಿರ್ಗತಿಕರಾದವರ ಮಾಹಿತಿಯನ್ನು ಒಳಗೊಂಡ ಅಂತಿಮ ವರದಿ ಸಲ್ಲಿಸಲು ಪ್ರಕರಣದ ಅಮಿಕಸ್ ಕ್ಯೂರಿಗೆ ಏಪ್ರಿಲ್ 29ರವರೆಗೆ ಹೈಕೋರ್ಟ್ ಕಾಲಾವಕಾಶ ನೀಡಿದೆ.</p><p>‘ತೆರವು ಕಾರ್ಯಾಚರಣೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು, ಸಂತ್ರಸ್ತರಿಗೆ ಪುನರ್ವಸತಿ ಹಾಗೂ ಪರಿಹಾರ ನೀಡಲು ನಿರ್ದೇಶಿಸಬೇಕು’ ಎಂದು ಕೋರಿ ಈ ಪ್ರದೇಶದಲ್ಲಿ ವಾಸವಿದ್ದ ಝೈಬಾ ತಬಸ್ಸುಮ್, ರೆಹಾನ ಮತ್ತು ಅರೀಫಾ ಬೇಗಂ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.</p><p>ವಿಚಾರಣೆ ವೇಳೆ ಅಮಿಕಸ್ ಕ್ಯೂರಿ ಬಿ.ವಿ.ವಿದ್ಯುಲ್ಲತಾ, ‘ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿದ್ದೆ. ಆದರೆ, ನಿರಾಶ್ರಿತರು ತಾವಿದ್ದ ಜಾಗ ತೊರೆದು ಪುನರ್ವಸತಿ ಕೇಂದ್ರಕ್ಕೆ ಹೋಗಲು ಇಷ್ಟಪಡುತ್ತಿಲ್ಲ. ಬಡಾವಣೆಯಲ್ಲಿಯೇ ಉಳಿದುಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಅಂತಿಮ ವರದಿಯನ್ನು ಎರಡು-ಮೂರು ವಾರಗಳಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು’ ಎಂದು ವಿವರಿಸಿದರು.</p><p>ಇದನ್ನು ಪರಿಗಣಿಸಿದ ನ್ಯಾಯಪೀಠ, ಪುನರ್ವಸತಿ ವ್ಯವಸ್ಥೆ ಕುರಿತಾದ ಅಂತಿಮ ವರದಿ ಸಲ್ಲಿಕೆಗೆ ಏಪ್ರಿಲ್ 29ರವರೆಗೆ ಗಡುವು ನೀಡಿ ವಿಚಾರಣೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>