ಮರಣೋತ್ತರ ಪರೀಕ್ಷೆ ತಪ್ಪಿಸಿ ಸಾಕ್ಷ್ಯ ನಾಶ: ‘ಏಪ್ರಿಲ್ 30ರಂದು ಮಠದ ಹಾಲ್ನಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಸ್ವಾಮೀಜಿ ನಿಧನರಾದ ಬಗ್ಗೆ ನಮಗೆ ಸುದ್ದಿ ಬಂದಿತ್ತು. ಆದರೆ, ಅವರು ನಿತ್ಯವೂ ಕೊಠಡಿಯೊಳಗೆ ಮಲಗುತ್ತಿದ್ದರು. ಯಾವತ್ತು ಹಾಲ್ನಲ್ಲಿ ಮಲಗುತ್ತಿರಲಿಲ್ಲ. ಜೊತೆಗೆ, ಬಾಗಿಲನ್ನು ಒಳಗಿನಿಂದ ಲಾಕ್ ಮಾಡಲಾಗಿತ್ತೆಂದು ಹೇಳಲಾಗುತ್ತಿದೆ. ಇದು ಅನುಮಾನ ಮೂಡಿಸಿದೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.