<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಈ ಕಾರಣದಿಂದ ಈವರೆಗೆ ₹5.50 ಕೋಟಿ ನಷ್ಟವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಹೇಳಿದೆ.</p>.<p>ಈವರೆಗೆ ಒಟ್ಟು 818 ಬಸ್ಗಳ ಸಂಚಾರ ರದ್ದು ಮಾಡಲಾಗಿದ್ದು, ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸುವವರ ಸಂಖ್ಯೆ ದಿನಕ್ಕೆ 5,500ಕ್ಕೆ ಕುಸಿದಿದೆ. ಈ ಮೊದಲು ದಿನಕ್ಕೆ 22 ಸಾವಿರದಿಂದ 23 ಸಾವಿರದವರೆಗೆ ಇರುತ್ತಿತ್ತು ಎಂದು ನಿಗಮ ತಿಳಿಸಿದೆ.</p>.<p class="Subhead"><strong>ಊಟಿ ಬಸ್ಗೆ ನಿರ್ಬಂಧ</strong></p>.<p>ಊಟಿಯಿಂದ ನಗರ ಪ್ರವೇಶಿಸುವ ಬಸ್ಗಳಿಗೆ ನಿರ್ಬಂಧ ವಿಧಿಸಲಾಗಿದೆ. ತಕ್ಷಣದಿಂದ ಈ ನಿಯಮ ಜಾರಿಗೆ ಬಂದಿದ್ದು, ಮಾರ್ಚ್ 31ರವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p class="Subhead"><strong>ಮುನ್ನೆಚ್ಚರಿಕೆ ಕ್ರಮಗಳು</strong></p>.<p>* ಬಸ್ಗಳ ಸ್ವಚ್ಛತಾ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಲಾಗಿದೆ</p>.<p>* ಘಟಕಗಳಲ್ಲಿ ಸೋಂಕು ನಿವಾರಕಗಳನ್ನು ಇಡಲು ಸೂಚಿಸಲಾಗಿದೆ</p>.<p>* ಐಷಾರಾಮಿ ಬಸ್ಗಳಲ್ಲಿ ಹಾಸಿಗೆ ನೀಡುವ ಸೌಲಭ್ಯ ರದ್ದುಗೊಳಿಸಲಾಗಿದೆ</p>.<p>* ನಿಗಮದ ಸಿಬ್ಬಂದಿಗೆ ಮುಖಗವಸು ವಿತರಿಸಲು ಸೂಚಿಸಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದಲ್ಲಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಈ ಕಾರಣದಿಂದ ಈವರೆಗೆ ₹5.50 ಕೋಟಿ ನಷ್ಟವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಹೇಳಿದೆ.</p>.<p>ಈವರೆಗೆ ಒಟ್ಟು 818 ಬಸ್ಗಳ ಸಂಚಾರ ರದ್ದು ಮಾಡಲಾಗಿದ್ದು, ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸುವವರ ಸಂಖ್ಯೆ ದಿನಕ್ಕೆ 5,500ಕ್ಕೆ ಕುಸಿದಿದೆ. ಈ ಮೊದಲು ದಿನಕ್ಕೆ 22 ಸಾವಿರದಿಂದ 23 ಸಾವಿರದವರೆಗೆ ಇರುತ್ತಿತ್ತು ಎಂದು ನಿಗಮ ತಿಳಿಸಿದೆ.</p>.<p class="Subhead"><strong>ಊಟಿ ಬಸ್ಗೆ ನಿರ್ಬಂಧ</strong></p>.<p>ಊಟಿಯಿಂದ ನಗರ ಪ್ರವೇಶಿಸುವ ಬಸ್ಗಳಿಗೆ ನಿರ್ಬಂಧ ವಿಧಿಸಲಾಗಿದೆ. ತಕ್ಷಣದಿಂದ ಈ ನಿಯಮ ಜಾರಿಗೆ ಬಂದಿದ್ದು, ಮಾರ್ಚ್ 31ರವರೆಗೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.</p>.<p class="Subhead"><strong>ಮುನ್ನೆಚ್ಚರಿಕೆ ಕ್ರಮಗಳು</strong></p>.<p>* ಬಸ್ಗಳ ಸ್ವಚ್ಛತಾ ಕಾರ್ಯವನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಲಾಗಿದೆ</p>.<p>* ಘಟಕಗಳಲ್ಲಿ ಸೋಂಕು ನಿವಾರಕಗಳನ್ನು ಇಡಲು ಸೂಚಿಸಲಾಗಿದೆ</p>.<p>* ಐಷಾರಾಮಿ ಬಸ್ಗಳಲ್ಲಿ ಹಾಸಿಗೆ ನೀಡುವ ಸೌಲಭ್ಯ ರದ್ದುಗೊಳಿಸಲಾಗಿದೆ</p>.<p>* ನಿಗಮದ ಸಿಬ್ಬಂದಿಗೆ ಮುಖಗವಸು ವಿತರಿಸಲು ಸೂಚಿಸಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>