<p><strong>ಬೆಂಗಳೂರು: </strong>‘ವಾಲ್ಮೀಕಿ ನಾಯಕ ಸಮುದಾಯಕ್ಕೆ ನ್ಯಾಯಯುತವಾಗಿ ಮೀಸಲಾತಿ ಹೆಚ್ಚಳ ಮಾಡುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ, ಅಧಿಕಾರಕ್ಕೆ ಬಂದ ಬಳಿಕ ಅದನ್ನು ಈಡೇರಿಸದೇ ವಚನಭ್ರಷ್ಟವಾಗಿದೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್. ಆಂಜನೇಯ ದೂರಿದರು.</p>.<p>ಪರಿಶಿಷ್ಟರ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೂರ್ತಿ ಸಮಿತಿ ಸಲ್ಲಿಸಿರುವ ವರದಿ ಜಾರಿಗೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿರುವ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಅವರು ಭೇಟಿಯಾಗಿ ಮಾತನಾಡಿದರು.</p>.<p>ದಲಿತ ಸಂಘಟನೆಗಳು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ನಗರ ಜಿಲ್ಲಾಧಿಕಾರಿ ಕಚೇರಿವರೆಗೆ ಹಮ್ಮಿ<br />ಕೊಂಡಿದ್ದ ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ಭಾಗವಹಿಸಿದರು. ‘ವಾಲ್ಮೀಕಿ ಸ್ವಾಮೀಜಿ ಧರಣಿ ಆರಂಭಕ್ಕೆ ಮುಂದಾಗುತ್ತಿದ್ದಂತೆಯೇ ಅವರ ಮನವೊಲಿಸುವ ಸಣ್ಣ ಪ್ರಯತ್ನವನ್ನು ಮಾಡಲಿಲ್ಲ ಎಂದರು. ದಲಿತ ಮುಖಂಡರಾದ ಶ್ರೀಧರ್ ಕಲಿವೀರ್. ಎಂ.ವೆಂಕಟಸ್ವಾಮಿ, ಎನ್.ಮೂರ್ತಿ, ಮೋಹನ ನಾಗರಾಜ್, ಹೆಣ್ಣೂರು ಶ್ರೀನಿವಾಸ, ಮಾವಳ್ಳಿ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ವಾಲ್ಮೀಕಿ ನಾಯಕ ಸಮುದಾಯಕ್ಕೆ ನ್ಯಾಯಯುತವಾಗಿ ಮೀಸಲಾತಿ ಹೆಚ್ಚಳ ಮಾಡುವುದಾಗಿ ಮಾತು ಕೊಟ್ಟಿದ್ದ ಬಿಜೆಪಿ, ಅಧಿಕಾರಕ್ಕೆ ಬಂದ ಬಳಿಕ ಅದನ್ನು ಈಡೇರಿಸದೇ ವಚನಭ್ರಷ್ಟವಾಗಿದೆ’ ಎಂದು ಕೆಪಿಸಿಸಿ ಉಪಾಧ್ಯಕ್ಷ ಎಚ್. ಆಂಜನೇಯ ದೂರಿದರು.</p>.<p>ಪರಿಶಿಷ್ಟರ ಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೂರ್ತಿ ಸಮಿತಿ ಸಲ್ಲಿಸಿರುವ ವರದಿ ಜಾರಿಗೆ ಒತ್ತಾಯಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸುತ್ತಿರುವ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಅವರು ಭೇಟಿಯಾಗಿ ಮಾತನಾಡಿದರು.</p>.<p>ದಲಿತ ಸಂಘಟನೆಗಳು ನಗರದ ಮೈಸೂರು ಬ್ಯಾಂಕ್ ವೃತ್ತದಿಂದ ನಗರ ಜಿಲ್ಲಾಧಿಕಾರಿ ಕಚೇರಿವರೆಗೆ ಹಮ್ಮಿ<br />ಕೊಂಡಿದ್ದ ಮೆರವಣಿಗೆ ಹಾಗೂ ಬಹಿರಂಗ ಸಭೆಯಲ್ಲಿ ಭಾಗವಹಿಸಿದರು. ‘ವಾಲ್ಮೀಕಿ ಸ್ವಾಮೀಜಿ ಧರಣಿ ಆರಂಭಕ್ಕೆ ಮುಂದಾಗುತ್ತಿದ್ದಂತೆಯೇ ಅವರ ಮನವೊಲಿಸುವ ಸಣ್ಣ ಪ್ರಯತ್ನವನ್ನು ಮಾಡಲಿಲ್ಲ ಎಂದರು. ದಲಿತ ಮುಖಂಡರಾದ ಶ್ರೀಧರ್ ಕಲಿವೀರ್. ಎಂ.ವೆಂಕಟಸ್ವಾಮಿ, ಎನ್.ಮೂರ್ತಿ, ಮೋಹನ ನಾಗರಾಜ್, ಹೆಣ್ಣೂರು ಶ್ರೀನಿವಾಸ, ಮಾವಳ್ಳಿ ಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>