ಬನಶಂಕರಿ 1ನೇ ಹಂತದ ಬ್ಯಾಂಕ್ ಕಾಲೊನಿ ಬಸ್ನಿಲ್ದಾಣದ ಹಿಂಭಾಗದಲ್ಲಿರುವ ಕೆಪಿಸಿಸಿ ಬೆಂಗಳೂರು ದಕ್ಷಿಣ ವಿಭಾಗದ ವೈದ್ಯಕೀಯ ಘಟಕದ ಕಚೇರಿ ಆವರಣದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆ ಹಾಗೂ ಜೆ.ಪಿ ನಗರದ ಶೇಖರ್ ನೇತ್ರಾಲಯದ ಹಿರಿಯ ವೈದ್ಯರು ಇದರಲ್ಲಿ ಪಾಲ್ಗೊಂಡಿದ್ದರು.