ಕೈಗಾರಿಕಾ ಸಂಘಟನೆಗಳ ಪ್ರತಿನಿಧಿಗಳು, ವ್ಯಾಪಾರಿಗಳು ಮತ್ತು ಕಾರ್ಮಿಕರ ಜೊತೆ ಪಕ್ಷದ ಕಚೇರಿಯಲ್ಲಿ ಸೋಮವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಸರ್ಕಾರ ತೀರ್ಮಾನಗಳಿಂದ ಎಲ್ಲ ವರ್ಗದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಉದ್ಯೋಗ ಸೃಷ್ಟಿಸಿ, ಸರ್ಕಾರಕ್ಕೆ ತೆರಿಗೆ ಕಟ್ಟಿ, ಸಮಾಜ ರಕ್ಷಿಸುತ್ತಿರುವ ವರ್ತಕರು ಬೇಸರಗೊಂಡಿದ್ದಾರೆ. ಈ ಸರ್ಕಾರ ತಮ್ಮ ಕೊನೆ ದಿನಗಳನ್ನು ಕಾಣುತ್ತಿರುವುದಕ್ಕೆ ಇದು ಸಾಕ್ಷಿ’ ಎಂದರು.