ಪಠ್ಯಕ್ರಮ ಪರಿಷ್ಕರಣೆ ಗೊಂದಲ ಕುರಿತು ಮಾತನಾಡಿ, ‘ರಾಜಕೀಯ ಕಾರ್ಯಸೂಚಿಯನ್ನು ಪಠ್ಯಕ್ರಮದಲ್ಲಿ ತರಲು ಸರ್ಕಾರ ಪ್ರಯತ್ನಿಸುತ್ತಿದೆ. ಇತಿಹಾಸ ತಿರುಚಿ, ಮುಂದಿನ ಪೀಳಿಗೆಗೆ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ಇತಿಹಾಸವನ್ನು ಯಾರೂ ಬದಲಿಸಲು ಸಾಧ್ಯವಿಲ್ಲ. ಎಲ್ಲ ಪ್ರಯತ್ನಗಳು ಕೆಲಕಾಲ ಮಾತ್ರ. ಸರ್ಕಾರದ ಈ ತಪ್ಪಿಗೆ ಮುಂದಿನ ದಿನಗಳಲ್ಲಿ ಜನರೇ ಶಿಕ್ಷೆ ನೀಡುತ್ತಾರೆ’ ಎಂದೂ ಹೇಳಿದರು.