‘ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಇತ್ತೀಚೆಗೆ ನಡೆದ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಬಗ್ಗೆ ಮಾತನಾಡುವ ವೇಳೆ ತೇಜಸ್ವಿ ಸೂರ್ಯ ಅವರು, ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇದನ್ನು ಖಂಡಿಸಿ ಮತ್ತು ಅವರಿಗೆ ಒಳ್ಳೆಯ ಮನಃಸ್ಥಿತಿಯನ್ನು ದೇವರು ದಯಪಾಲಿಸಲಿ ಎಂದು ಪಂಚದುರ್ಗೆಯ ಜ್ವಾಲೆಯಲ್ಲಿ ದ್ವೇಷ, ಕ್ಲೇಶ, ದುಷ್ಟ ಬುದ್ಧಿ ದೂರವಾಗಲಿ ಎಂದು ಬ್ರಾಹ್ಮೀ ಮುಹೂರ್ತದಲ್ಲಿ ವಿಶೇಷ ಪೂಜೆ ಮಾಡಿದ್ದೇವೆ. ಈ ಮೂಲಕ, ‘ದ್ವೇಷ ಬಿಡಿ ಸಂಸದ ತೇಜಸ್ವಿ ಸೂರ್ಯ’ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದೇವೆ’ ಎಂದರು.