ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಪಿಎಲ್‌ಗೂ ಬೆಟ್ಟಿಂಗ್‌: ₹ 10.36 ಲಕ್ಷ ವಶ

Last Updated 20 ಆಗಸ್ಟ್ 2019, 19:05 IST
ಅಕ್ಷರ ಗಾತ್ರ

ಬೆಂಗಳೂರು: ಹುಬ್ಬಳ್ಳಿ ಟೈಗರ್ಸ್‌ ಮತ್ತು ಬಳ್ಳಾರಿ ಟಸ್ಕರ್ಸ್‌ ಮಧ್ಯೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆ ನಡೆದ ಕೆಪಿಎಲ್‌ ಪಂದ್ಯದ ಸಂದರ್ಭದಲ್ಲಿ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಹರೀಶ್‌ ಕುಮಾರ್‌ ಜೈನ್‌, ಪ್ರವೀಣ್‌ ಮತ್ತು ವಿಕಾಸ್‌ ಜೈನ್‌ ಬಂಧಿತರು. ಆರೋಪಿಗಳಿಂದ ₹ 10.36 ಲಕ್ಷ ಮತ್ತು ಮೂರು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಜೆ.ಪಿ. ನಗರ ಠಾಣಾ ವ್ಯಾಪ್ತಿಯ ಸಾಯಿ ಮೆಡ್‌ಲೈಫ್‌ ಮೆಡಿಕಲ್‌ ಸ್ಟೋರ್‌ ಸಮೀಪ ವೆಬ್‌ಸೈಟ್‌ ಮೂಲಕ ಈ ಕ್ರಿಕೆಟ್‌ ತಂಡಗಳ ಸೋಲು ಗೆಲುವಿನ ಬಗ್ಗೆ ಹಣ ಕಟ್ಟಿಸಿಕೊಂಡು ಆರೋಪಿಗಳು ಜೂಜಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದರು.

ಈ ಬಗ್ಗೆ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು, ನಗದು ಮತ್ತು ಮೊಬೈಲ್‌ ಜಪ್ತಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT