<p><strong>ನೆಲಮಂಗಲ</strong>: ಸರ್ಕಾರಿ ಶಾಲೆಗಳನ್ನು ಮುಚ್ಚಿ ‘ಕೆಪಿಎಸ್- ಮ್ಯಾಗ್ನೆಟ್’ ಯೋಜನೆ ಜಾರಿಗೊಳಿಸುವುದನ್ನು ವಿರೋಧಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿಶ್ವೇಶ್ವರಪುರದ ಸರ್ಕಾರಿ ಶಾಲೆಯ ಮುಂಭಾಗ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿತ್ತು.</p>.<p>ತಾಲ್ಲೂಕಿನ ವಿಶ್ವೇಶ್ವರಪುರ, ಲೋಹಿತನಗರ, ಮೈಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಇಸ್ಲಾಂಪುರದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗಳನ್ನು ಉಳಿಸಿಕೊಳ್ಳಲು ನಡೆದ ಸಮಾವೇಶದಲ್ಲಿ ಐದು ಹಳ್ಳಿಗಳ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ವಿ.ಕಲ್ಯಾಣ್ ಕುಮಾರ್ ಮಾತನಾಡಿ, ‘ಶಿಕ್ಷಣದ ಹಕ್ಕನ್ನು ಉಳಿಸಿಕೊಳ್ಳಲು ಎಐಡಿಎಸ್ಒ ದೇಶದಾದ್ಯಂತ ಹೋರಾಟ ನಡೆಸುತ್ತಿದೆ. ಸರ್ಕಾರವು ಮೂಲಸೌಕರ್ಯ ಒದಗಿಸದೆ, ದಾಖಲಾತಿ ಕೊರತೆಯ ನೆಪವೊಡ್ಡಿ ಮ್ಯಾಗ್ನೆಟ್ ಯೋಜನೆಯ ಮೂಲಕ ರಾಜ್ಯದ 40 ಸಾವಿರ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ’ ಎಂದರು.</p>.<p>‘ವಾಹನ ಸೌಲಭ್ಯದ ಆಮಿಷವೊಡ್ಡಿ ಹಳ್ಳಿ ಶಾಲೆಗಳನ್ನು ನಾಶಮಾಡಿ, ಪೋಷಕರನ್ನು ಖಾಸಗಿ ಶಾಲೆಗಳತ್ತ ತಳ್ಳಲಾಗುತ್ತಿದೆ. ಖಾಸಗಿ ಸಂಸ್ಥೆಗಳಿಗೆ ಮಣೆ ಹಾಕುವ ಬದಲು ಹಳ್ಳಿಯ ಶಾಲೆಗಳನ್ನೇ ಮಾದರಿ ಶಾಲೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದರು.</p>.<p>ವಿಶ್ವೇಶ್ವರಪುರ ಶಾಲೆ ನಿವೃತ್ತ ಶಿಕ್ಷಕ್ಷಿ ಗೀತಾ ಮಾತನಾಡಿ, ‘5 ಕಿಲೋಮೀಟರ್ ದೂರದ ಶಾಲೆಗೆ ಪುಟ್ಟ ಮಕ್ಕಳು ಪ್ರತಿದಿನ ಪ್ರಯಾಣ ಮಾಡುವುದು ಅಸಾಧ್ಯ. ಇದು ಮಕ್ಕಳನ್ನು ಶಿಕ್ಷಣದಿಂದ ದೂರವಿಡುವ ಸಂಚು’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷರಾದ ಅಭಯ ದಿವಾಕರ್, ಮೈಲನಹಳ್ಳಿಯ ವೆಂಕಟೇಶ್, ವಿಶ್ವೇಶ್ವರಪುರ ಮುಖಂಡ ಬೈಲಮೂರ್ತಿ, ಇಸ್ಲಾಂಪುರ ‘ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ’ಯ ಸದಸ್ಯರಾದ ಅಸ್ಲಾಂ ಪಾಷ, ಎಐಯುಟಿಯುಸಿ ಕಾರ್ಮಿಕ ಮುಖಂಡರಾದ ಹನುಮೇಶ್ ಮಾತನಾಡಿದರು. ಎಐಡಿಎಸ್ಒ ಜಿಲ್ಲಾ ಕಾರ್ಯಕಾರಿ ಮಂಡಳಿಯ ಸದಸ್ಯೆ ಎಸ್.ಪ್ರಕೃತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ</strong>: ಸರ್ಕಾರಿ ಶಾಲೆಗಳನ್ನು ಮುಚ್ಚಿ ‘ಕೆಪಿಎಸ್- ಮ್ಯಾಗ್ನೆಟ್’ ಯೋಜನೆ ಜಾರಿಗೊಳಿಸುವುದನ್ನು ವಿರೋಧಿಸಿ ಎಐಡಿಎಸ್ಒ ನೇತೃತ್ವದಲ್ಲಿ ವಿಶ್ವೇಶ್ವರಪುರದ ಸರ್ಕಾರಿ ಶಾಲೆಯ ಮುಂಭಾಗ ಪ್ರತಿಭಟನಾ ಸಮಾವೇಶ ಆಯೋಜಿಸಲಾಗಿತ್ತು.</p>.<p>ತಾಲ್ಲೂಕಿನ ವಿಶ್ವೇಶ್ವರಪುರ, ಲೋಹಿತನಗರ, ಮೈಲನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಇಸ್ಲಾಂಪುರದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಗಳನ್ನು ಉಳಿಸಿಕೊಳ್ಳಲು ನಡೆದ ಸಮಾವೇಶದಲ್ಲಿ ಐದು ಹಳ್ಳಿಗಳ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.</p>.<p>ಎಐಡಿಎಸ್ಒ ಜಿಲ್ಲಾ ಕಾರ್ಯದರ್ಶಿ ವಿ.ಕಲ್ಯಾಣ್ ಕುಮಾರ್ ಮಾತನಾಡಿ, ‘ಶಿಕ್ಷಣದ ಹಕ್ಕನ್ನು ಉಳಿಸಿಕೊಳ್ಳಲು ಎಐಡಿಎಸ್ಒ ದೇಶದಾದ್ಯಂತ ಹೋರಾಟ ನಡೆಸುತ್ತಿದೆ. ಸರ್ಕಾರವು ಮೂಲಸೌಕರ್ಯ ಒದಗಿಸದೆ, ದಾಖಲಾತಿ ಕೊರತೆಯ ನೆಪವೊಡ್ಡಿ ಮ್ಯಾಗ್ನೆಟ್ ಯೋಜನೆಯ ಮೂಲಕ ರಾಜ್ಯದ 40 ಸಾವಿರ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಖಂಡನೀಯ’ ಎಂದರು.</p>.<p>‘ವಾಹನ ಸೌಲಭ್ಯದ ಆಮಿಷವೊಡ್ಡಿ ಹಳ್ಳಿ ಶಾಲೆಗಳನ್ನು ನಾಶಮಾಡಿ, ಪೋಷಕರನ್ನು ಖಾಸಗಿ ಶಾಲೆಗಳತ್ತ ತಳ್ಳಲಾಗುತ್ತಿದೆ. ಖಾಸಗಿ ಸಂಸ್ಥೆಗಳಿಗೆ ಮಣೆ ಹಾಕುವ ಬದಲು ಹಳ್ಳಿಯ ಶಾಲೆಗಳನ್ನೇ ಮಾದರಿ ಶಾಲೆಗಳನ್ನಾಗಿ ಮಾಡಲು ಸರ್ಕಾರ ಮುಂದಾಗಬೇಕು’ ಎಂದು ಆಗ್ರಹಿಸಿದರು.</p>.<p>ವಿಶ್ವೇಶ್ವರಪುರ ಶಾಲೆ ನಿವೃತ್ತ ಶಿಕ್ಷಕ್ಷಿ ಗೀತಾ ಮಾತನಾಡಿ, ‘5 ಕಿಲೋಮೀಟರ್ ದೂರದ ಶಾಲೆಗೆ ಪುಟ್ಟ ಮಕ್ಕಳು ಪ್ರತಿದಿನ ಪ್ರಯಾಣ ಮಾಡುವುದು ಅಸಾಧ್ಯ. ಇದು ಮಕ್ಕಳನ್ನು ಶಿಕ್ಷಣದಿಂದ ದೂರವಿಡುವ ಸಂಚು’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಎಐಡಿಎಸ್ಒ ರಾಜ್ಯ ಉಪಾಧ್ಯಕ್ಷರಾದ ಅಭಯ ದಿವಾಕರ್, ಮೈಲನಹಳ್ಳಿಯ ವೆಂಕಟೇಶ್, ವಿಶ್ವೇಶ್ವರಪುರ ಮುಖಂಡ ಬೈಲಮೂರ್ತಿ, ಇಸ್ಲಾಂಪುರ ‘ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ’ಯ ಸದಸ್ಯರಾದ ಅಸ್ಲಾಂ ಪಾಷ, ಎಐಯುಟಿಯುಸಿ ಕಾರ್ಮಿಕ ಮುಖಂಡರಾದ ಹನುಮೇಶ್ ಮಾತನಾಡಿದರು. ಎಐಡಿಎಸ್ಒ ಜಿಲ್ಲಾ ಕಾರ್ಯಕಾರಿ ಮಂಡಳಿಯ ಸದಸ್ಯೆ ಎಸ್.ಪ್ರಕೃತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>