ಬೆಂಗಳೂರು: ವಿವಿಧ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪಾವಿತ್ರ್ಯತೆ, ಗೋಪ್ಯ, ಪಾರದರ್ಶಕತೆ ಕಾಪಾಡುವ ಜೊತೆಗೆ, ತ್ವರಿತವಾಗಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಗೋಪ್ಯ ವಿಭಾಗ ಮತ್ತು ಐಟಿ (ಮಾಹಿತಿ ತಂತ್ರಜ್ಞಾನ) ಕೋಶವನ್ನು ಬಲಪಡಿಸಬೇಕೆಂಬ ಕೆಪಿಎಸ್ಸಿ ಪ್ರಸ್ತಾವಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.