ಬುಧವಾರ ಬೆಳಿಗ್ಗೆ 8 ಗಂಟೆಗೆ ಕೆಪಿಎಸ್ಸಿ ಕಚೇರಿ ಎದುರು ಅಭ್ಯರ್ಥಿಗಳ ಜೊತೆ ಸುರೇಶ್ ಕುಮಾರ್ ಸತ್ಯಾಗ್ರಹ ಆರಂಭಿಸಿದ್ದರು. ಈ ಮಾಹಿತಿ ಗೊತ್ತಾಗುತ್ತಿದ್ದಂತೆ, ಸಂದರ್ಶನಕ್ಕೆ ದಿನ ನಿಗದಿಪಡಿಸಿರುವ ವಿಷಯವನ್ನು ಕೆಪಿಎಸ್ಸಿ ಕಾರ್ಯದರ್ಶಿ ಆರ್.ಆರ್. ಜನ್ನು ಲಿಖಿತವಾಗಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಅವರು ಉಪವಾಸ ಸತ್ಯಾಗ್ರಹ ಹಿಂತೆಗೆದುಕೊಂಡರು.