ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಯಲ್ಲಿ ವ್ಯಕ್ತಿತ್ವ ಪರೀಕ್ಷೆ ಹಂತದಲ್ಲಿ ಭ್ರಷ್ಟಾಚಾರ ನಡೆದಿದ್ದರಿಂದ ಸಿಐಡಿ ತನಿಖೆ ನಡೆಯಿತು. ಈ ನೇಮಕಾತಿ ಕಾನೂನುಬಾಹಿರ ಎಂದು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ಗಳು ತೀರ್ಪು ನೀಡಿವೆ. ಆದರೂ ಸರ್ಕಾರ ಮಸೂದೆಯೊಂದನ್ನು ಜಾರಿಗೆ ತಂದು, ಅಭ್ಯರ್ಥಿಗಳ ನೇಮಕಕ್ಕೆ ಮುಂದಾಗಿದ್ದು ಸರಿಯಲ್ಲ’ ಎಂದು ಹೇಳಿದರು.