‘ನೇಮಕಾತಿ ಪ್ರಕ್ರಿಯೆಯ ಎಲ್ಲ ಹಂತಗಳಲ್ಲಿ ನಿಗಾ ವಹಿಸಲು ಆಯೋಗ ಸಾಧ್ಯವಾದ ಎಲ್ಲ ಕ್ರಮಗಳನ್ನು ತೆಗೆದುಕೊಂಡಿದೆ. ಈ ಬಾರಿ ಅಭ್ಯರ್ಥಿಗಳ ವ್ಯಕ್ತಿತ್ವ ಪರೀಕ್ಷೆಗೆ (ಸಂದರ್ಶನ) ನಿವೃತ್ತ ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳು, ಕುಲಪತಿಗಳು, ಮುಖ್ಯ ಎಂಜಿನಿಯರ್ಗಳು ಮತ್ತು ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರನ್ನು ವಿಷಯತಜ್ಞರನ್ನಾಗಿ ಆಹ್ವಾನಿಸಲಾಗಿತ್ತು’ ಎಂದರು.