‘ಸಂಭಾವ್ಯ ಜ್ಯೇಷ್ಠತಾ ಪಟ್ಟಿಗೆ ಅರ್ಜಿದಾರರು ಸಲ್ಲಿಸಿರುವ ಆಕ್ಷೇಪಣೆಯನ್ನು ಪರಿಗಣಿಸಬೇಕು. ನಂತರ ಅರ್ಜಿದಾರರು ಹೈದರಾಬಾದ್ ಕರ್ನಾಟಕ ಪ್ರದೇಶದ ಮೀಸಲು ಕೋಟಾದಡಿ ಸಹಾಯಕ ಎಂಜಿನಿಯರ್ ಹುದ್ದೆ ಬಡ್ತಿ ಪಡೆಯಲು ಅರ್ಹರಾಗಿದ್ದಾರೋ ಅಥವಾ ಇಲ್ಲವೋ ಎಂಬ ಬಗ್ಗೆ ಪರಿಶೀಲಿಸಿ ನಾಲ್ಕು ವಾರಗಳಲ್ಲಿ ಸೂಕ್ತ ಅದೇಶ ಹೊರಡಿಸಬೇಕು. ಅಲ್ಲಿಯವರಿಗೆ ಸಹಾಯಕ ಎಂಜಿನಿಯರ್ ಹುದ್ದೆಗೆ ಬಡ್ತಿಯ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಬಾರದು’ ಎಂದು ನ್ಯಾಯಪೀಠ ಕೆಪಿಟಿಸಿಎಲ್ಗೆ ನಿರ್ದೇಶಿಸಿದೆ.