<p><strong>ಬೆಂಗಳೂರು: </strong>ನಗರದ ಕೃಷ್ಣರಾಜ ವೃತ್ತ (ಕೆ.ಆರ್. ಸರ್ಕಲ್) ಒಂದು ವಾರದಲ್ಲಿ ಹೊಸ ರೂಪ ಪಡೆಯಲಿದೆ. ವೃತ್ತದ ಮಧ್ಯಭಾಗದಲ್ಲಿ ಕಾಬೂಲ್ ಶಿಲೆಗಳ ಮೂಲಕ ಆಕರ್ಷಕವಾಗಿ ಕಾಣುವಂತೆ ವಿನ್ಯಾಸಗೊಳಿಸಲಾಗುತ್ತಿದ್ದು, ಈ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ.</p>.<p>ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಶನಿವಾರ ಈ ಕಾಮಗಾರಿಯ ಪರಿಶೀಲನೆ ನಡೆಸಿದರು.</p>.<p>‘ಈ ವೃತ್ತದಲ್ಲಿ ವಿದ್ಯುತ್ ದೀಪ ಅಳವಡಿಕೆ, ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಭೂದೃಶ್ಯ ಅಲಂಕಾರ ಹಾಗೂ ಡಾಂಬರೀಕರಣ ಸೇರಿದಂತೆ ವಿವಿಧ ಕಾಮಗಾರಿ ಈ ತಿಂಗಳ ಕೊನೆಗೆ ಮುಗಿಯಲಿದೆ’ ಎಂದು ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಮಾಹಿತಿ ನೀಡಿದರು.</p>.<p>‘ನಗರದ ವಿವಿಧ ವೃತ್ತ, ಜಂಕಷನ್ಗಳನ್ನು ಅಭಿವೃದ್ಧಿಗೊಳಿಸುವ ಸಂದರ್ಭದಲ್ಲಿ ವಾಹನ ಸವಾವರರಿಗೆ ಯಾವುದೇ ಅನನುಕೂಲವಾಗದಂತೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಗೌರವ್ ಗುಪ್ತ ಸೂಚನೆ ನೀಡಿದರು.</p>.<p>ನಗರದಲ್ಲಿ ಬಿಬಿಎಂಪಿ ವತಿಯಿಂದ ಜಂಕ್ಷನ್ಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡಿದ್ದು, ಈಗಾಗಲೇ ಗಂಗಾನಗರ, ಸದಾಶಿವನಗರ, ದೊಮ್ಮಲೂರು, ಮತ್ತಿಕೆರೆ, ವಿಜಯನಗರ ಜಂಕ್ಷನ್ ಗಳ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಕೃಷ್ಣರಾಜ ವೃತ್ತ (ಕೆ.ಆರ್. ಸರ್ಕಲ್) ಒಂದು ವಾರದಲ್ಲಿ ಹೊಸ ರೂಪ ಪಡೆಯಲಿದೆ. ವೃತ್ತದ ಮಧ್ಯಭಾಗದಲ್ಲಿ ಕಾಬೂಲ್ ಶಿಲೆಗಳ ಮೂಲಕ ಆಕರ್ಷಕವಾಗಿ ಕಾಣುವಂತೆ ವಿನ್ಯಾಸಗೊಳಿಸಲಾಗುತ್ತಿದ್ದು, ಈ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ.</p>.<p>ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಶನಿವಾರ ಈ ಕಾಮಗಾರಿಯ ಪರಿಶೀಲನೆ ನಡೆಸಿದರು.</p>.<p>‘ಈ ವೃತ್ತದಲ್ಲಿ ವಿದ್ಯುತ್ ದೀಪ ಅಳವಡಿಕೆ, ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಭೂದೃಶ್ಯ ಅಲಂಕಾರ ಹಾಗೂ ಡಾಂಬರೀಕರಣ ಸೇರಿದಂತೆ ವಿವಿಧ ಕಾಮಗಾರಿ ಈ ತಿಂಗಳ ಕೊನೆಗೆ ಮುಗಿಯಲಿದೆ’ ಎಂದು ಮುಖ್ಯ ಎಂಜಿನಿಯರ್ ಬಿ.ಎಸ್. ಪ್ರಹ್ಲಾದ್ ಮಾಹಿತಿ ನೀಡಿದರು.</p>.<p>‘ನಗರದ ವಿವಿಧ ವೃತ್ತ, ಜಂಕಷನ್ಗಳನ್ನು ಅಭಿವೃದ್ಧಿಗೊಳಿಸುವ ಸಂದರ್ಭದಲ್ಲಿ ವಾಹನ ಸವಾವರರಿಗೆ ಯಾವುದೇ ಅನನುಕೂಲವಾಗದಂತೆ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಗೌರವ್ ಗುಪ್ತ ಸೂಚನೆ ನೀಡಿದರು.</p>.<p>ನಗರದಲ್ಲಿ ಬಿಬಿಎಂಪಿ ವತಿಯಿಂದ ಜಂಕ್ಷನ್ಗಳ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಂಡಿದ್ದು, ಈಗಾಗಲೇ ಗಂಗಾನಗರ, ಸದಾಶಿವನಗರ, ದೊಮ್ಮಲೂರು, ಮತ್ತಿಕೆರೆ, ವಿಜಯನಗರ ಜಂಕ್ಷನ್ ಗಳ ಅಭಿವೃದ್ಧಿ ಕಾರ್ಯ ಪೂರ್ಣಗೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>