ರಸ್ತೆ ಪಕ್ಕದಲ್ಲಿದ್ದ ಸೊಪ್ಪು ಎಸೆದಿದ್ದರಿಂದ ಉಂಟಾಗಿದ್ದ ಕೆಸರು, ನಸುಕಿನಲ್ಲಿ ಸುರಿದ ತುಂತುರು ಮಳೆಯಿಂದಾಗಿ ರಸ್ತೆಯಲ್ಲಿ ಹರಡಿಕೊಂಡಿತ್ತು. ಕಚೇರಿ ಕೆಲಸಗಳಿಗೆ ತೆರಳುವ ಧಾವಂತದಲ್ಲಿದ್ದ ಹಲವು ದ್ವಿಚಕ್ರ ವಾಹನ ಸವಾರರು ಈ ರಸ್ತೆಯಲ್ಲಿ ಹಾದು ಹೋಗುವಾಗ ಉರುಳಿ ಬಿದ್ದರು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದರು. ಇದರಿಂದಾಗಿ ಕೆಲಹೊತ್ತು ಈ ರಸ್ತೆಯಲ್ಲಿ ವಾಹನ ದಟ್ಟಣೆಯೂ ಉಂಟಾಯಿತು.