ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತ್ವರಿತ ಕಾಮಗಾರಿಗೆ ಶಾಸಕ ಬೈರತಿ ಸೂಚನೆ

ಜಲಮಂಡಳಿ ಅಧಿಕಾರಿಗಳಿಗೆ ಶಾಸಕ ಬೈರತಿ ಬಸವರಾಜ ಸೂಚನೆ
Last Updated 22 ಜೂನ್ 2019, 19:29 IST
ಅಕ್ಷರ ಗಾತ್ರ

ಕೆ.ಆರ್.ಪುರ: ‘ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾವೇರಿ ನೀರಿನ ಪೂರೈಕೆ ಮತ್ತು ಒಳಚರಂಡಿ ಪೈ‍ಪ್‌ಲೈನ್ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಿ’ ಎಂದು ಜಲಮಂಡಳಿ ಅಧಿಕಾರಿಗಳಿಗೆ ಶಾಸಕ ಬೈರತಿ ಬಸವರಾಜ ತಾಕೀತು ಮಾಡಿದರು.

ಮೇಡಹಳ್ಳಿ ಪ್ರಾದೇಶಿಕ ಸಾರಿಗೆ ಕಚೇರಿ ಬಳಿ ₹2 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.

‘ಜನರಿಗೆ ತೊಂದರೆ ಆಗದಂತೆ ಕಾಮಗಾರಿ ನಿರ್ವಹಿಸಬೇಕು. ಟ್ಯಾಂಕರ್ ನೀರು ಖರೀದಿ ಮಾಡುವುದು ಜನರಿಗೆ ದುಬಾರಿಯಾಗಿದೆ. ಹೀಗಾಗಿ ಆದಷ್ಟು ಬೇಗ ಕೆಲಸ ಪೂರ್ಣಗೊಳಿಬೇಕು’ ಎಂದು ಸೂಚಿಸಿದರು.

ಪಾಲಿಕೆ ಸದಸ್ಯ ಜಯಪ್ರಕಾಶ್, ಮುಖಂಡರಾದ ರಾಜೇಶ್, ಶೀಗೆಹಳ್ಳಿ ಸುಂದರ್, ಎಡ್ವಿನ್ ಇಸಾಕ್, ಓಂ ಮಹೇಶ್, ಜಗನಾಥ್, ಜಲಮಂಡಳಿ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT