<p><strong>ಕೆ.ಆರ್.ಪುರ:</strong> ‘ಕ್ಷೇತ್ರದ ಜನರು ನನ್ನ ಮೇಲೆ ನಂಬಿಕೆ ಇಟ್ಟು ಬೆಂಬಲಿಸುತ್ತಿದ್ದಾರೆ. ಕ್ಷೇತ್ರದ ಜನರ ಪ್ರೀತಿಗೆ ಚಿರರುಣಿಯಾಗಿವೆ. ಕ್ಷೇತ್ರದಲ್ಲಿ ಅಭಿವೃದ್ಧಿಯ ಮೂಲಕ ಜನರ ಕಷ್ಟಗಳನ್ನು ಅರಿಯುವೆ’ ಎಂದು ಶಾಸಕ ಬೈರತಿ ಬಸವರಾಜ ಹೇಳಿದರು.</p>.<p>ತಮ್ಮ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು, ಕಾರ್ಯಕರ್ತರು ಹಮ್ಮಿಕೊಂಡಿದ್ದ ಸೇವಾ ಕಾರ್ಯಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್, ‘ಶಾಸಕ ಬೈರತಿ ಬಸವರಾಜ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ್ದೇವೆ. ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದ್ದಾರೆ’ ಎಂದರು.</p>.<p>ಇದೇ ವೇಳೆ ನೂರಾರು ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಬೈರತಿ ಬಸವರಾಜ ಅವರಿಗೆ ಶುಭಾಶಯ ಕೋರಿದರು. ವಿಜ್ಞಾನಗರ ಅಸೋಸಿಯೇಷನ್ ಮತ್ತು ಲಯನ್ಸ್ ಕ್ಲಬ್ ಮತ್ತು ಎಸ್.ಕೆ.ಎಫ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನೂರಾರು ಜನರು ರಕ್ತದಾನ ಮಾಡಿದರು.</p>.<p>ಪಾಲಿಕೆ ಮಾಜಿ ಸದಸ್ಯರಾದ ಶ್ರೀಕಾಂತ್, ಪಿ.ಜೆ.ಅಂತೋಣಿಸ್ವಾಮಿ, ಸುರೇಶ್, ಮುಖಂಡರಾದ ಹೇಮಂತ್ ಚಿನ್ನಿ, ಭಟ್ಟರಹಳ್ಳಿ ರಾಖಿ, ಎಂ.ಎಲ್.ಡಿ.ಸಿ ಮುನಿರಾಜು, ನಾಗೇನಹಳ್ಳಿ ಲೋಕೇಶ್, ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ‘ಕ್ಷೇತ್ರದ ಜನರು ನನ್ನ ಮೇಲೆ ನಂಬಿಕೆ ಇಟ್ಟು ಬೆಂಬಲಿಸುತ್ತಿದ್ದಾರೆ. ಕ್ಷೇತ್ರದ ಜನರ ಪ್ರೀತಿಗೆ ಚಿರರುಣಿಯಾಗಿವೆ. ಕ್ಷೇತ್ರದಲ್ಲಿ ಅಭಿವೃದ್ಧಿಯ ಮೂಲಕ ಜನರ ಕಷ್ಟಗಳನ್ನು ಅರಿಯುವೆ’ ಎಂದು ಶಾಸಕ ಬೈರತಿ ಬಸವರಾಜ ಹೇಳಿದರು.</p>.<p>ತಮ್ಮ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು, ಕಾರ್ಯಕರ್ತರು ಹಮ್ಮಿಕೊಂಡಿದ್ದ ಸೇವಾ ಕಾರ್ಯಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು.</p>.<p>ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್, ‘ಶಾಸಕ ಬೈರತಿ ಬಸವರಾಜ ಅವರ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ್ದೇವೆ. ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದ್ದಾರೆ’ ಎಂದರು.</p>.<p>ಇದೇ ವೇಳೆ ನೂರಾರು ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಬೈರತಿ ಬಸವರಾಜ ಅವರಿಗೆ ಶುಭಾಶಯ ಕೋರಿದರು. ವಿಜ್ಞಾನಗರ ಅಸೋಸಿಯೇಷನ್ ಮತ್ತು ಲಯನ್ಸ್ ಕ್ಲಬ್ ಮತ್ತು ಎಸ್.ಕೆ.ಎಫ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ನೂರಾರು ಜನರು ರಕ್ತದಾನ ಮಾಡಿದರು.</p>.<p>ಪಾಲಿಕೆ ಮಾಜಿ ಸದಸ್ಯರಾದ ಶ್ರೀಕಾಂತ್, ಪಿ.ಜೆ.ಅಂತೋಣಿಸ್ವಾಮಿ, ಸುರೇಶ್, ಮುಖಂಡರಾದ ಹೇಮಂತ್ ಚಿನ್ನಿ, ಭಟ್ಟರಹಳ್ಳಿ ರಾಖಿ, ಎಂ.ಎಲ್.ಡಿ.ಸಿ ಮುನಿರಾಜು, ನಾಗೇನಹಳ್ಳಿ ಲೋಕೇಶ್, ಪ್ರಕಾಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>