<p><strong>ಬೆಂಗಳೂರು:</strong> ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಮದ್ರಾಸ್ ರಸ್ತೆಯ ಸೇತುವೆ ಮೇಲೆ ಟಾಟಾ ಏಸ್ ಸರಕು ಸಾಗಣೆ ವಾಹನ ಹಾಗೂ ಬೈಕ್ ನಡುವೆ ಬುಧವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಬೈಕ್ ಸವಾರರಾದ ಬಿ.ಶಾಲಿನಿ (27) ಮೃತಪಟ್ಟಿದ್ದಾರೆ.</p>.<p>ಜೆ.ಪಿ.ನಗರದ ನೀರಾ ಥಾಯ್ ಸ್ಪಾದಲ್ಲಿ ಶಾಲಿನಿ ಅವರು ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಕೋರಮಂಗಲದ ತೆರಿಗೆ ಕಚೇರಿಯ ಎದುರಿನ ಅಂಬೇಡ್ಕರ್ ನಗರದಲ್ಲಿ ನೆಲೆಸಿದ್ದರು. ಬುಧವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಟಿನ್ ಫ್ಯಾಕ್ಟರಿ ಕಡೆಯಿಂದ ಸರಕು ವಾಹನ ಬರುತ್ತಿತ್ತು. ಚಾಲಕ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಸೇತುವೆಯ ಮಸೀದಿ ಬಳಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು, ಶಾಲಿನಿ ಹಾಗೂ ಹಿಂಬದಿ ಸವಾರರಾದ ಜೆ. ಅಲೆನ್<br />ಸ್ಮಿತ್ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಆಲ್ಟೋರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶಾಲಿನಿ ಮೃತಪಟ್ಟಿದ್ದಾರೆ. ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಚಾಲಕನ ಪತ್ತೆ ಮಾಡಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆ.ಆರ್.ಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಳೆ ಮದ್ರಾಸ್ ರಸ್ತೆಯ ಸೇತುವೆ ಮೇಲೆ ಟಾಟಾ ಏಸ್ ಸರಕು ಸಾಗಣೆ ವಾಹನ ಹಾಗೂ ಬೈಕ್ ನಡುವೆ ಬುಧವಾರ ಬೆಳಿಗ್ಗೆ ನಡೆದ ಅಪಘಾತದಲ್ಲಿ ಬೈಕ್ ಸವಾರರಾದ ಬಿ.ಶಾಲಿನಿ (27) ಮೃತಪಟ್ಟಿದ್ದಾರೆ.</p>.<p>ಜೆ.ಪಿ.ನಗರದ ನೀರಾ ಥಾಯ್ ಸ್ಪಾದಲ್ಲಿ ಶಾಲಿನಿ ಅವರು ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಕೋರಮಂಗಲದ ತೆರಿಗೆ ಕಚೇರಿಯ ಎದುರಿನ ಅಂಬೇಡ್ಕರ್ ನಗರದಲ್ಲಿ ನೆಲೆಸಿದ್ದರು. ಬುಧವಾರ ಬೆಳಿಗ್ಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<p>‘ಟಿನ್ ಫ್ಯಾಕ್ಟರಿ ಕಡೆಯಿಂದ ಸರಕು ವಾಹನ ಬರುತ್ತಿತ್ತು. ಚಾಲಕ ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಸೇತುವೆಯ ಮಸೀದಿ ಬಳಿ ಸ್ಕೂಟರ್ಗೆ ಡಿಕ್ಕಿ ಹೊಡೆದಿದ್ದು, ಶಾಲಿನಿ ಹಾಗೂ ಹಿಂಬದಿ ಸವಾರರಾದ ಜೆ. ಅಲೆನ್<br />ಸ್ಮಿತ್ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಆಲ್ಟೋರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಶಾಲಿನಿ ಮೃತಪಟ್ಟಿದ್ದಾರೆ. ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಚಾಲಕನ ಪತ್ತೆ ಮಾಡಲಾಗುವುದು’ ಎಂದು ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>