‘ಎಲ್ಲರು ಪರಿಸರ ಕಾಳಜಿ ಹೊಂದಿದರೆ ನಾಡು ಸಮೃದ್ಧವಾಗಲಿದೆ. ಇತ್ತೀಚಿನ ವರ್ಷಗಳಲ್ಲಿ ಅಂತರ್ಜಲ ಮಟ್ಟ ಕಡಿಮೆಯಾಗಿದೆ. ನೀರಿನ ಮಟ್ಟ ವೃದ್ಧಿಸಲು ಪರಿಸರ ಸಂರಕ್ಷಣೆ ಮಾಡಬೇಕು. ವಿಭೂತಿಪುರ ಕೆರೆಯನ್ನು ಹಸಿರು ಉದ್ಯಾನವಾಗಿ ಪರಿವರ್ತಿಸಿ ಮಾದರಿ ಕೆರೆಯನ್ನಾಗಿ ಅಭಿವೃದ್ಧಿ ಮಾಡಲಾಗುವುದು. ₹4 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಕೆರೆ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾ, ತೆರೆದ ಜಿಮ್, ಪಾದಚಾರಿ ಮಾರ್ಗ ನಿರ್ಮಾಣ ಮಾಡಲಾಗುವುದು’ ಎಂದರು.