<p><strong>ಬೆಂಗಳೂರು:</strong> ಕೆ.ಆರ್.ಪುರ ಪ್ರದೇಶದಲ್ಲಿ ಅನಧಿಕೃತವಾಗಿ ಆಪ್ಟಿಕಲ್ ಫೈಬರ್ ಕೇಬಲ್ಗಳನ್ನು ರಾತ್ರಿ ವೇಳೆ ಹಾಕಲಾಗುತ್ತಿದೆ. ರಸ್ತೆಗಳನ್ನು ಮರು ನಿರ್ಮಿಸದೆ ಸಾರ್ವಜನಿಕರಿಗೆ ತೊಂದರೆಯಾಗಿದೆ.</p>.<p>ವಿಜಿನಾಪುರ ವಾರ್ಡಿನ ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ ಪಾಲಿಕೆಯ ಅನುಮತಿಯಿಲ್ಲದೆ ಖಾಸಗಿ ಟೆಲಿಕಾಂ ಸಂಸ್ಥೆ ಅಂತರ್ಜಾಲ ಸೇವೆ ಒದಗಿಸಲು ಕೇಬಲ್ ಅಳವಡಿಸುತ್ತಿದೆ. ಈ ಮಾಹಿತಿ ತಿಳಿದು ಪಾಲಿಕೆ ಸದಸ್ಯ ಬಂಡೆ ಎಸ್.ರಾಜು ಅವರು ಕಾಮಗಾರಿ ನಡೆಸುವ ಯಂತ್ರಗಳನ್ನು ವಶಕ್ಕೆ ಪಡೆದು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದರು. ಆದರೆ, ಪ್ರಕರಣ ದಾಖಲಾಗಿಲ್ಲ.</p>.<p>‘ಗುಂಡಿ ಮುಚ್ಚುವಂತೆ ಹೈಕೋರ್ಟ್ ಆದೇಶಿಸಿದೆ. ಆದರೆ, ನಮ್ಮ ಕ್ಷೇತ್ರದಲ್ಲಿ ಅನಧಿಕೃತವಾಗಿ ಒಎಫ್ಸಿ ಅಳವಡಿಕೆ ದೊಡ್ಡ ಮಾಫಿಯಾವಾಗಿಬಿಟ್ಟಿದೆ. ಈ ಬಗ್ಗೆ ಪ್ರಶ್ನಿಸಲು ಅಧಿಕಾರಿಗಳು ಧೈರ್ಯ ತೋರುತ್ತಿಲ್ಲ’ ಎಂದು ರಾಜು ದೂರಿದರು.</p>.<p>ಕೇಬಲ್ ಅಳವಡಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ದೂರು ದಾಖಲಿಸಲಾಗಿದೆ. ಸಂಬಂಧಪಟ್ಟವರು ಸರಿಯಾದ ದಾಖಲೆ ಕೊಡದಿದ್ದರೆ ಅವರ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ವಿಜಿನಾಪುರ ವಾರ್ಡ್ನ ಸಹಾಯಕ ಎಂಜಿನಿಯರ್ ಕೇಶವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆ.ಆರ್.ಪುರ ಪ್ರದೇಶದಲ್ಲಿ ಅನಧಿಕೃತವಾಗಿ ಆಪ್ಟಿಕಲ್ ಫೈಬರ್ ಕೇಬಲ್ಗಳನ್ನು ರಾತ್ರಿ ವೇಳೆ ಹಾಕಲಾಗುತ್ತಿದೆ. ರಸ್ತೆಗಳನ್ನು ಮರು ನಿರ್ಮಿಸದೆ ಸಾರ್ವಜನಿಕರಿಗೆ ತೊಂದರೆಯಾಗಿದೆ.</p>.<p>ವಿಜಿನಾಪುರ ವಾರ್ಡಿನ ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ ಪಾಲಿಕೆಯ ಅನುಮತಿಯಿಲ್ಲದೆ ಖಾಸಗಿ ಟೆಲಿಕಾಂ ಸಂಸ್ಥೆ ಅಂತರ್ಜಾಲ ಸೇವೆ ಒದಗಿಸಲು ಕೇಬಲ್ ಅಳವಡಿಸುತ್ತಿದೆ. ಈ ಮಾಹಿತಿ ತಿಳಿದು ಪಾಲಿಕೆ ಸದಸ್ಯ ಬಂಡೆ ಎಸ್.ರಾಜು ಅವರು ಕಾಮಗಾರಿ ನಡೆಸುವ ಯಂತ್ರಗಳನ್ನು ವಶಕ್ಕೆ ಪಡೆದು ಸ್ಥಳೀಯ ಠಾಣೆಯಲ್ಲಿ ದೂರು ದಾಖಲಿಸಿದರು. ಆದರೆ, ಪ್ರಕರಣ ದಾಖಲಾಗಿಲ್ಲ.</p>.<p>‘ಗುಂಡಿ ಮುಚ್ಚುವಂತೆ ಹೈಕೋರ್ಟ್ ಆದೇಶಿಸಿದೆ. ಆದರೆ, ನಮ್ಮ ಕ್ಷೇತ್ರದಲ್ಲಿ ಅನಧಿಕೃತವಾಗಿ ಒಎಫ್ಸಿ ಅಳವಡಿಕೆ ದೊಡ್ಡ ಮಾಫಿಯಾವಾಗಿಬಿಟ್ಟಿದೆ. ಈ ಬಗ್ಗೆ ಪ್ರಶ್ನಿಸಲು ಅಧಿಕಾರಿಗಳು ಧೈರ್ಯ ತೋರುತ್ತಿಲ್ಲ’ ಎಂದು ರಾಜು ದೂರಿದರು.</p>.<p>ಕೇಬಲ್ ಅಳವಡಿಸುತ್ತಿರುವುದು ಗಮನಕ್ಕೆ ಬಂದಿದೆ. ಅಂಥವರ ವಿರುದ್ಧ ದೂರು ದಾಖಲಿಸಲಾಗಿದೆ. ಸಂಬಂಧಪಟ್ಟವರು ಸರಿಯಾದ ದಾಖಲೆ ಕೊಡದಿದ್ದರೆ ಅವರ ಮೇಲೆ ದಂಡ ವಿಧಿಸಲಾಗುತ್ತದೆ ಎಂದು ವಿಜಿನಾಪುರ ವಾರ್ಡ್ನ ಸಹಾಯಕ ಎಂಜಿನಿಯರ್ ಕೇಶವ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>