ರಾಯಚೂರು, ಕಲಬುರ್ಗಿ, ಬೆಳಗಾವಿ, ಬಳ್ಳಾರಿ, ಯಾದಗಿರಿ ಕಡೆಯಿಂದ ಕೆಲಸಕ್ಕೆ ಬಂದ ನೂರಾರು ಕುಟುಂಬಗಳು ಎಚ್.ಬಿ.ಆರ್.ವಾರ್ಡಿನ ರಾಮ ದೇವಸ್ಥಾನ ಬಳಿ ಹೊಂದಿಕೊಂಡಿರುವ ಸರ್ಕಾರಿ ಜಮೀನಿನಲ್ಲಿ ಶೆಡ್ ಗಳನ್ನು ಕಟ್ಟಿಕೊಂಡು ಜೀವನ ನಡೆಸುತ್ತಿವೆ. ಹಲವು ಕೂಲಿ ಕಾರ್ಮಿಕರು ಊರಿಗೆ ತೆರಳಿದ ವೇಳೆ ದುಷ್ಕರ್ಮಿಗಳು 150ಕ್ಕೂ ಹೆಚ್ಚು ಶೆಡ್ಗಳನ್ನು ನೆಲಸಮಗೊಳಿಸಿದ್ದಾರೆ. 15 ಶೆಡ್ಗಳನ್ನು ಸುಟ್ಟು ಹಾಕಿದ್ದಾರೆ. 18 ಶೆಡ್ಗಳಲ್ಲಿ ವಾಸಿಸುತ್ತಿರುವವರು ಕೂಡಲೇ ಖಾಲಿ ಮಾಡುವಂತೆ ಬೆದರಿಕೆ ಒಡ್ಡಿದ್ದಾರೆ.