ಸಂಚಾರ ಠಾಣೆ ಪ್ರಸ್ತುತ ಮಾರುಕಟ್ಟೆ ಸಮೀಪದ ಹಳೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದೆ. ಈ ಕಟ್ಟಡ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ರಸ್ತೆಯಲ್ಲಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಪೊಲೀಸರು ವಾಹನಗಳ ತಪಾಸಣೆ ನಡೆಸುವ ವೇಳೆ ಸಂಚಾರ ದಟ್ಟಣೆ ಉಂಟಾಗುತ್ತಿತ್ತು. ಕೆ.ಆರ್.ಪುರ ಎಕ್ಸ್ಟೆನ್ಶನ್ ಬಳಿ ನೂತನ ಕಟ್ಟಡಕ್ಕೆ ಆಗಿನ ಗೃಹ ಸಚಿವ ಜಿ.ಪರಮೇಶ್ವರ ಒಂದೂವರೆ ವರ್ಷಗಳ ಹಿಂದೆ ಗುದ್ದಲಿ ಪೂಜೆ ನೆರವೇರಿಸಿದ್ದರು.