<p><strong>ಕೆ.ಆರ್.ಪುರ:</strong> ಬಿದರಹಳ್ಳಿ-ಕಿತ್ತಗನೂರು ಮುಖ್ಯರಸ್ತೆಯನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್ ಅವರು ಬುಧವಾರ ಪರಿವೀಕ್ಷಣೆ ನಡೆಸಿದರು.</p>.<p>‘ಬಿದರಹಳ್ಳಿ- ಕಿತ್ತಗನೂರು ರಸ್ತೆ ಕೆಸರುಮಯ' ಎಂಬ ವರದಿ ‘ಪ್ರಜಾವಾಣಿ’ಯ ಮಂಗಳವಾರದ ಸಂಚಿಕೆಯಲ್ಲಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ರಸ್ತೆ ಅಭಿವೃದ್ಧಿಪಡಿಸಲು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಮುಖ್ಯರಸ್ತೆಯ ಅಕ್ಕಪಕ್ಕದಲ್ಲಿನ ಜಮೀನು ಮಾಲೀಕರ ಖಾಸಗಿ ಸ್ವತ್ತುಗಳಿಗೆ ಸಂಬಂಧಿಸಿದ ವ್ಯಾಜ್ಯ ಇರುವುದರಿಂದ ರಸ್ತೆ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.</p>.<p>ವಸಂತ್ ಕುಮಾರ್ ಮಾತನಾಡಿ, ‘ಬಿದರಹಳ್ಳಿ- ಕಿತ್ತಗನೂರು ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಎಂಟು ಗುಂಟೆ ಜಮೀನಿಗೆ ಟಿಡಿಆರ್ ನೀಡಬೇಕಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ಜಮೀನು ವಶಪಡಿಸಿಕೊಂಡು ರಸ್ತೆ ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>ಕಿತ್ತಗನೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ.ನಾಗರಾಜ್, ಬಿದರಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ.ಎನ್.ಲೋಹಿತ್, ಕಾರ್ಯದರ್ಶಿ ಎನ್.ಮುನಿರಾಜು, ಸ್ಥಳೀಯ ಮುಖಂಡ ವಿ.ಪಿ.ಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ಬಿದರಹಳ್ಳಿ-ಕಿತ್ತಗನೂರು ಮುಖ್ಯರಸ್ತೆಯನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್ ಅವರು ಬುಧವಾರ ಪರಿವೀಕ್ಷಣೆ ನಡೆಸಿದರು.</p>.<p>‘ಬಿದರಹಳ್ಳಿ- ಕಿತ್ತಗನೂರು ರಸ್ತೆ ಕೆಸರುಮಯ' ಎಂಬ ವರದಿ ‘ಪ್ರಜಾವಾಣಿ’ಯ ಮಂಗಳವಾರದ ಸಂಚಿಕೆಯಲ್ಲಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ರಸ್ತೆ ಅಭಿವೃದ್ಧಿಪಡಿಸಲು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು.</p>.<p>ಮುಖ್ಯರಸ್ತೆಯ ಅಕ್ಕಪಕ್ಕದಲ್ಲಿನ ಜಮೀನು ಮಾಲೀಕರ ಖಾಸಗಿ ಸ್ವತ್ತುಗಳಿಗೆ ಸಂಬಂಧಿಸಿದ ವ್ಯಾಜ್ಯ ಇರುವುದರಿಂದ ರಸ್ತೆ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.</p>.<p>ವಸಂತ್ ಕುಮಾರ್ ಮಾತನಾಡಿ, ‘ಬಿದರಹಳ್ಳಿ- ಕಿತ್ತಗನೂರು ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಎಂಟು ಗುಂಟೆ ಜಮೀನಿಗೆ ಟಿಡಿಆರ್ ನೀಡಬೇಕಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ಜಮೀನು ವಶಪಡಿಸಿಕೊಂಡು ರಸ್ತೆ ಅಭಿವೃದ್ಧಿಪಡಿಸಲಾಗುವುದು’ ಎಂದರು.</p>.<p>ಕಿತ್ತಗನೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ.ನಾಗರಾಜ್, ಬಿದರಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ.ಎನ್.ಲೋಹಿತ್, ಕಾರ್ಯದರ್ಶಿ ಎನ್.ಮುನಿರಾಜು, ಸ್ಥಳೀಯ ಮುಖಂಡ ವಿ.ಪಿ.ಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>