<p><strong>ಕೆಂಗೇರಿ:</strong> ಸೋಲಿನ ಕನವರಿಕೆಯು ನಮ್ಮ ಮುಂದಿನ ಪ್ರಯತ್ನಕ್ಕೆ ಧಕ್ಕೆ ತರುತ್ತದೆ. ಸೋಲನ್ನು ಮರೆತು ಆತ್ಮ ವಿಶ್ವಾಸದಿಂದ ಮುನ್ನುಗ್ಗಬೇಕು ಎಂದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅಭಿಪ್ರಾಯಪಟ್ಟರು.</p>.<p>ಕಲಾ ಮತ್ತು ಪ್ರದರ್ಶನ ವಿಭಾಗದ ವತಿಯಿಂದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಯುವಜನೋತ್ಸವ-2019 ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕುಲಸಚಿವ ಪ್ರೊ.ಬಿ.ಕೆ.ರವಿ ಮಾತನಾಡಿ, ‘ಸುಮಾರು 50ಕ್ಕೂ ಕಾಲೇಜುಗಳ ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿನ ಪ್ರತಿಭಾ ಅನಾವರಣಕ್ಕೆ ಇಂತಹ ವೇದಿಕೆಗಳು ಸಹಕಾರಿಯಾಗಲಿವೆ. ವ್ಯಕ್ತಿತ್ವ ವಿಕಸನದಲ್ಲಿ ಸಾಂಸ್ಕತಿಕ ಕಾರ್ಯಕ್ರಮಗಳು ಪಠ್ಯಗಳಷ್ಟೇ ಪ್ರಮುಖ ಪಾತ್ರ ವಹಿಸುತ್ತವೆ’ ಎಂದರು.</p>.<p>ರಂಗಭೂಮಿ ಕಲಾವಿದ ರಿಚರ್ಡ್ ಲೂಯಿಸ್ ಮಾತನಾಡಿ, ‘ರಂಗಭೂಮಿಯು ಜೀವನ ಪಾಠವನ್ನು ಕಲಿಸುತ್ತದೆ. ಏನೂ ಓದದ ಎಷ್ಟೋ ಕಲಾವಿದರ ಬದುಕು ಇಂದು ಅಧ್ಯಯನದ ವಿಷಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಂಗೇರಿ:</strong> ಸೋಲಿನ ಕನವರಿಕೆಯು ನಮ್ಮ ಮುಂದಿನ ಪ್ರಯತ್ನಕ್ಕೆ ಧಕ್ಕೆ ತರುತ್ತದೆ. ಸೋಲನ್ನು ಮರೆತು ಆತ್ಮ ವಿಶ್ವಾಸದಿಂದ ಮುನ್ನುಗ್ಗಬೇಕು ಎಂದು ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಅಭಿಪ್ರಾಯಪಟ್ಟರು.</p>.<p>ಕಲಾ ಮತ್ತು ಪ್ರದರ್ಶನ ವಿಭಾಗದ ವತಿಯಿಂದ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ಯುವಜನೋತ್ಸವ-2019 ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಕುಲಸಚಿವ ಪ್ರೊ.ಬಿ.ಕೆ.ರವಿ ಮಾತನಾಡಿ, ‘ಸುಮಾರು 50ಕ್ಕೂ ಕಾಲೇಜುಗಳ ವಿದ್ಯಾರ್ಥಿಗಳು ಯುವಜನೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳಲ್ಲಿನ ಪ್ರತಿಭಾ ಅನಾವರಣಕ್ಕೆ ಇಂತಹ ವೇದಿಕೆಗಳು ಸಹಕಾರಿಯಾಗಲಿವೆ. ವ್ಯಕ್ತಿತ್ವ ವಿಕಸನದಲ್ಲಿ ಸಾಂಸ್ಕತಿಕ ಕಾರ್ಯಕ್ರಮಗಳು ಪಠ್ಯಗಳಷ್ಟೇ ಪ್ರಮುಖ ಪಾತ್ರ ವಹಿಸುತ್ತವೆ’ ಎಂದರು.</p>.<p>ರಂಗಭೂಮಿ ಕಲಾವಿದ ರಿಚರ್ಡ್ ಲೂಯಿಸ್ ಮಾತನಾಡಿ, ‘ರಂಗಭೂಮಿಯು ಜೀವನ ಪಾಠವನ್ನು ಕಲಿಸುತ್ತದೆ. ಏನೂ ಓದದ ಎಷ್ಟೋ ಕಲಾವಿದರ ಬದುಕು ಇಂದು ಅಧ್ಯಯನದ ವಿಷಯವಾಗಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>