ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ,'ನಗರದ ಸಮಗ್ರ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳ ನವ ನಗರೋತ್ಥಾನ ಯೋಜನೆಯಡಿ ₹8,343 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ₹5 ಸಾವಿರ ಕೋಟಿಗೂ ಹೆಚ್ಚಿನ ಕಾಮಗಾರಿ
ಗಳನ್ನು ಕೆಆರ್ಐಡಿಎಲ್ಗೆ ನೀಡಲಾಗಿದೆ. ತುರ್ತು ಕಾಮಗಾರಿಗಳ ಹೆಸರಿನಲ್ಲಿ ಕೋಟ್ಯಂತರ ಹಣ ಲೂಟಿ ಮಾಡಲಾಗಿದೆ' ಎಂದು ಆರೋಪಿಸಿದರು.