ಬೆಂಗಳೂರು: ನಾಗರಿಕ ಸೇವೆಗಳ ಪೂರ್ವಭಾವಿ ಪರೀಕ್ಷೆಗಾಗಿ ತರಬೇತಿ ಮತ್ತು ಮಾರ್ಗದರ್ಶನಕ್ಕಾಗಿ ಅರ್ಹ ಮತ್ತು ಪ್ರತಿಭಾನ್ವಿತ ಅಭ್ಯರ್ಥಿಗಳಿಂದ ಕೃಷಿಕ್ ಸರ್ವೋದಯ ಫೌಂಡೇಷನ್ ಅರ್ಜಿ ಆಹ್ವಾನಿಸಿದೆ.
ತರಬೇತಿ ಪಡೆಯ ಬಯಸುವ ಅಭ್ಯರ್ಥಿಗಳ ಆಯ್ಕೆಗಾಗಿ ಪ್ರತಿಷ್ಠಾನವು ಆ.28ರಂದು ಪ್ರವೇಶ ಪರೀಕ್ಷೆಯನ್ನು ಪ್ರತಿಷ್ಠಾನವು ಆಯೋಜಿಸಿದೆ. ಅರ್ಹ ಅಭ್ಯರ್ಥಿಗಳು ಆ.27ರೊಳಗೆ www.ksfkarnataka.com ನಲ್ಲಿ ಹೆಸರು ನೋಂದಾಯಿಸುವಂತೆ ಪ್ರಕಟಣೆ ತಿಳಿಸಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಜೊತೆಗೆ, ಕೋರ್ಸ್ ಶುಲ್ಕದಲ್ಲಿ ರಿಯಾಯಿತಿಯನ್ನು ಕೊಡಲಾಗುವುದು ಎಂದು ಫೌಂಡೇಷನ್ ಹೇಳಿದೆ.