ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ರದ್ದುಪಡಿಸಿರುವ ಕುರಿತು ನಗರದಲ್ಲಿ ಶುಕ್ರವಾರ ಉಪನ್ಯಾಸ ನೀಡಿದ್ದ ಸಂತೋಷ್, ‘ನೆಹರೂ ಅವರ ಎಡವಟ್ಟುಗಳಿಂದ ಜಮ್ಮು ಮತ್ತು ಕಾಶ್ಮೀರ ಹಿಂಸಾಚಾರದ ತಾಣವಾಗಿತ್ತು. ಅದನ್ನು ಮೋದಿ ಸರಿಪಡಿಸಿದ್ದಾರೆ’ ಎಂದು ಹೇಳಿದ್ದರು. ಈ ಹೇಳಿಕೆಗೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ.