ಯಲಹಂಕ: ‘ರಾಜ್ಯ ಸರ್ಕಾರವು ಬಿಬಿಎಂಪಿ ವಾರ್ಡ್ಗಳ ಪುನರ್ ವಿಂಗ ಡಣೆಯನ್ನು ಜನರ ಅನುಕೂಲಕ್ಕೆ ತಕ್ಕಂತೆ ಮಾಡದೆ, ರಾಜಕೀಯ ಲಾಭಕ್ಕಾಗಿ ಇಷ್ಟಬಂದಂತೆ ಮಾಡಿಕೊಂಡಿದೆ’ ಎಂದು ಶಾಸಕ ಕೃಷ್ಣಬೈರೇಗೌಡ ಆರೋಪಿಸಿದರು.
ಅವಧಿ ಪೂರ್ಣಗೊಳಿಸಿದ ಬಿಬಿಎಂಪಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆಬ್ಯಾಟರಾಯನಪುರ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಕೊಡಿಗೇಹಳ್ಳಿಯ ಗುಂಡಾಂಜನೇಯಸ್ವಾಮಿ ಕಲ್ಯಾಣಮಂಟಪದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.
‘ಯಾವಾಗ ಬೇಕಾದರೂ ಗ್ರಾಮಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗಳು ನಡೆಯುವ ಸಂಭವವಿರುವುದರಿಂದ ಕಾರ್ಯಕರ್ತರು ಹಾಗೂ ಮುಖಂಡರು ಈಗಿನಿಂದಲೇ ಸಿದ್ಧರಾಗಿ ಪಕ್ಷಸಂಘಟನೆಯಲ್ಲಿ ಸಕ್ರಿಯರಾಗಬೇಕು’ ಎಂದರು.