ಮುಂಜಾನೆ ದೇವಾಲಯದಲ್ಲಿ ದೇವರಿಗೆ ಅಭಿಷೇಕ, ವಿಶೇಷ ಪೂಜಾ ಕೈಂಕರ್ಯ, ಹೋಮ, ಹವನ ನೆರವೇರಿತು. ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ದಿನವಿಡೀ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ದೇವಸಂದ್ರ, ಅಯ್ಯಪ್ಪನಗರ, ರಾಮಮೂರ್ತಿನಗರ, ಬಸವನಪುರ, ಹೂಡಿ, ಭಟ್ಟರಹಳ್ಳಿ, ಟಿಸಿ ಪಾಳ್ಯ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ದೇವರ ದರ್ಶನ ಪಡೆದು ಪುನಿತರಾದರು.
ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಬಾಬು, ರಾಜ್ಯ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಡಿ.ಎ.ಗೋಪಾಲ್, ಮುಖಂಡರಾದ ಚಲಪತಿ, ದೇವೇಂದ್ರ, ಚನ್ನಕೇಶವಲು, ಅಗರ ಪ್ರಕಾಶ್, ರಮೇಶ್ ಇದ್ದರು.